ಬೆಂಗಳೂರಿನಲ್ಲಿ ಕೆರೆ ಏರಿ ಒಡೆದು ನೀರು ನುಗ್ಗಿದ ಪರಿಣಾಮ ಭಾರೀ ಅವಾಂತರ ಸೃಷ್ಟಿಯಾಗಿ ಜನರು ಪರದಾಡುತ್ತಿರುವ ಘಟನೆ ನಡೆದಿದೆ. ನಗರದ ಹುಳಿಮಾವು ಎಂಬಲ್ಲಿ ಜೆಸಿಬಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕೆರೆಯ ಏರಿ ಒಡೆದು ಈ ಘಟನೆ ಸಂಭವಿಸಿದೆ.
ಇಂದು ಬೆಳಗ್ಗೆಯಿಂದ ಬಿಬಿಎಂಪಿ ವತಿಯಿಂದ ಕೆರೆಯ ಕಾಮಗಾರಿ ಕೆಲಸ ನಡೆಯುತ್ತಿತ್ತು. ಈ ವೇಳೆ ಕೆರೆಯ ನೀರನ್ನು ಬೇರೆಡೆಗೆ ಹರಿಸುವ ಕೆಲಸ ನಡೆಯುತ್ತಿತ್ತು. ಆಗ ಕೆರೆಯ ಕಟ್ಟೆ ಒಡೆದಿದ್ದು, 200ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.
ಕೆರೆ ಒಟ್ಟು 140 ಎಕರೆ ಇರುವುದರಿಂದ ಕೆರೆಯ ಅಕ್ಕಪಕ್ಕದ ಮನೆಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ. ಶಾಂತಿನಿಕೇತನ, ಕೃಷ್ಣನಗರ, ಹುಳಿಮಾವು ಸೇರಿದಂತೆ ಹಲವು ಲೇಔಟ್ಗಳಿಗೆ ನೀರು ನುಗ್ಗಿದೆ.
ಬಿಳೇಕಹಳ್ಳಿಯ ನ್ಯಾನೋ ಆಸ್ಪತ್ರೆಗೂ ನೀರು ನುಗ್ಗಿದ್ದು ರೋಗಿಗಳನ್ನು ಸ್ಥಳಾಂತರ ಮಾಡಲು ಹರಸಾಹಸ ಪಡಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕಾ ಇಲಾಖೆಯ ಸಿಬಂದಿ ಧಾವಿಸಿದ್ದು ನೆರೆ ನೀರಿನಲ್ಲಿ ಸಿಕ್ಕಾಕೊಂಡವರನ್ನು ರಕ್ಷಣೆ ಮಾಡಲಾಗಿದೆ. ಘಟನೆಯ ಬಿಬಿಎಂಪಿ ನಿರ್ಲಕ್ಷವೇ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
Discussion about this post