ನವದೆಹಲಿ : ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ 2017ರಲ್ಲಿ ಆದೇಶ ನೀಡಿದ್ದ ಹಿನ್ನಲೆಯಲ್ಲಿ ಹಲವು ಅಂಗಡಿಗಳನ್ನು ಮುಚ್ಚಲಾಗಿತ್ತು. ಇದೇ ಆದೇಶದಲ್ಲಿ ರಾಜ್ಯ ಹೆದ್ದಾರಿಯಲ್ಲೂ ಮದ್ಯದಂಗಡಿ ಇರಬಾರದು ಎಂದು ಹೇಳಿತ್ತು. ಆದರೆ ಇದು ಕಟ್ಟು ನಿಟ್ಟಾಗಿ ಜಾರಿಯಾಗಿರಲಿಲ್ಲ.
2016ರ ಆದೇಶದ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯಿಂದ 500 ಮೀಟರ್ ಹಾಗೂ ರಾಜ್ಯ ಹೆದ್ದಾರಿಯಿಂದ 220 ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ಮುಚ್ಚಬೇಕಾಗಿತ್ತು ಈ ನಡುವೆ ಹಲವು ರಸ್ತೆಗಳು ಇದೀಗ ರಾಜ್ಯ ಹೆದ್ದಾರಿಯಾಗಿ ಬದಲಾಗಿದೆ. ಈ ಹಿಂದೆ ಆ ರಸ್ತೆಗಳು ಜಿಲ್ಲಾ ರಸ್ತೆಗಳಾಗಿತ್ತು.
ಇದೀಗ ಸುಪ್ರೀಂಕೋರ್ಟ್ ಆದೇಶದ ಹಿನ್ನಲೆಯಲ್ಲಿ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಸೂಚಿಸಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶವನ್ನು ಕಳುಹಿಸಿದೆ. ಈ ಆದೇಶದಲ್ಲಿ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವಾಗ ಸುಪ್ರೀಂಕೋರ್ಟ್ ಆದೇಶ ಗಮನದಲ್ಲಿ ಇರಲಿ ಅಂದಿದೆ. ಜೊತೆಗೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯ ಉತ್ಪನ್ನಗಳ ಜಾಹೀರಾತು ಕೂಡಾ ಇರುವಂತಿಲ್ಲ ಎಂದು ಹೇಳಿದೆ. ಆದರೆ ಮದ್ಯ ತಯಾರಕರು ಸೋಡಾ, ಮಿನರಲ್ ವಾಟರ್ ಜಾಹೀರಾತು ಹಾಕಿ ಸುಪ್ರೀಂಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆಯುತ್ತಿದ್ದಾರೆ.
Discussion about this post