ನವದೆಹಲಿ : ಈಗಾಗಲೇ ಕೊರೋನಾ ಕಾರಣದಿಂದ ತತ್ತರಿಸಿ ಹೋಗಿದ್ದ ಜನ ಎರಡನೇ ಅಲೆಯ ಅಬ್ಬರ ಕಡಿಮೆಯಾಗುತ್ತಿದ್ದಂತೆ ಜನಜೀವನವನ್ನು ಸಹಜ ಸ್ಥಿತಿಗೆ ತರಲು ಸರ್ಕಸ್ ಮಾಡುತ್ತಿದ್ದಾರೆ. ಅದರಲ್ಲೂ ಬಡ ಹಾಗೂ ಮಧ್ಯಮ ವರ್ಗದ ಮಂದಿಯ ಜೀವನದ ಕಥೆಯನ್ನು ಹೇಳುವುದೇ ಬೇಡ. ಕೊರೋನಾ ಅಬ್ಬರ ಕಡಿಮೆಯಾಯ್ತು ಕೆಲಸ ಕಾರ್ಯ ಶುರುವಾಯ್ತು ಅನ್ನುವಷ್ಟು ಹೊತ್ತಿಗೆ ಆಗತ್ಯ ವಸ್ತುಗಳ ಬೆಲೆ ಗಗನಮುಖಿಯಾಗಿದೆ.
ಇದೀಗ ಮತ್ತೆ ಅಡುಗೆ ಅನಿಲ ದರವನ್ನು ತೈಲ ಕಂಪನಿಗಳು ಏರಿಸಿದ್ದು ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2101 ರೂ.ಗೆ ಏರಿಕೆಯಾಗಿದೆ. ಅರೇ ಇದರಿಂದ ಜನ ಸಾಮಾನ್ಯರಿಗೇನು ಕಷ್ಟ ಅನ್ನಬೇಡಿ. ಅದ್ಯಾವುದೇ ವಸ್ತುವಿನ ದರ ಏರಿಕೆಯಾದರೂ ಮೊದಲು ಪೆಟ್ಟು ತಿನ್ನುವುದು ಬಡ ಮತ್ತು ಮಧ್ಯಮ ವರ್ಗದ ಮಂದಿ.
ಡಿಸೆಂಬರ್ 1 ರಿಂದ ಅನ್ವಯವಾಗುವಂತೆ LPG ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಲಾಗಿದ್ದು ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ನ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 103.50 ಪೈಸೆಯಷ್ಟು ಏರಿಸಿದೆ. ಹೀಗಾಗಿ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 100.50 ರೂ ಹೆಚ್ಚಳವಾಗಿದೆ. ಈ ಮೂಲಕ ಇಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ 2101 ರೂಪಾಯಿ ದಾಖಲಾಗಿದೆ. ಇನ್ನು ಡೆಲಿವರಿ ಜಾರ್ಜ್ ಆಯಾ ಪ್ರದೇಶಕ್ಕೆ ಅನುಗುಣವಾಗಿ ವ್ಯತ್ಯಯವಾಗುತ್ತದೆ.
ಅಯ್ಯೋ ಭಗವಂತ : ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ
ನವದೆಹಲಿ : ಅದ್ಯಾವ ಸರ್ಕಾರ ಅಧಿಕಾರಕ್ಕೆ ಬರಲಿ ಹಸಿರು ಶಾಲು ಹೊದ್ದು, ನಾವು ರೈತ ಪರ, ನಾವು ಮಣ್ಣಿನ ಮಕ್ಕಳು ಅನ್ನುತ್ತಾರೆ. ಆದರೆ ರೈತ ಬೆಳೆದ ಬೆಳೆಗೆ ಸೂಕ್ತ ಬೆಲೆ ಕಲ್ಪಿಸುವ ಯೋಗ್ಯತೆ ಇವರಿಗಿರುವುದಿಲ್ಲ. ಭತ್ತ ಬೆಳೆದ ರೈತರ ಸಂಕಷ್ಟ ಇದಕ್ಕೆ ಉತ್ತಮ ಉದಾಹರಣೆ. ಭತ್ತಕ್ಕೆ ಬೆಂಬಲ ಬೆಲೆ ಕೊಡುವ ನಿಟ್ಟಿನಲ್ಲಿ ಸೂಕ್ತ ನಿಯಮ ರೂಪಿಸಿ ಅಂದ್ರೆ ರಾಜ್ಯ ಸರ್ಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲ.
ಈ ನಡುವೆ ರೈತರ ಆತ್ಮಹತ್ಯೆ ವಿಚಾರದಲ್ಲಿ ಕರ್ನಾಟಕ ನಂಬರ್ 2 ಅನ್ನು ಅಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಕೇಂದ್ರ ಸರ್ಕಾರವೇ ಲೋಕಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು 2020ರಲ್ಲಿ ಭಾರತದಲ್ಲಿ 5579 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 2567 ರೈತರು ಮಹರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ರೆ, ಕರ್ನಾಟಕದಲ್ಲಿ 1072 ರೈತರು ಆತ್ಮಹತ್ಯೆ ಶರಣಾಗಿದ್ದಾರೆ.
ಮೂರನೇ ಸ್ಥಾನದಲ್ಲಿ ಆಂಧ್ರ ಪ್ರದೇಶವಿದ್ದು ಅಲ್ಲಿ 564 ರೈತರು, ನಾಲ್ಕನೇ ಸ್ಥಾನದಲ್ಲಿ ತೆಲಂಗಾಣವಿದ್ದು ಅಲ್ಲಿ 466, 5ನೇ ಸ್ಥಾನದಲ್ಲಿ ಮಧ್ಯಪ್ರದೇಶವಿದ್ದು ಅಲ್ಲಿ 235, ನಂತರದ ಸ್ಥಾನದಲ್ಲಿ ಛತ್ತೀಸ್ಗಢವಿದ್ದು ಅಲ್ಲಿ 227 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್ ಲೋಕಸಭೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು, 2019ರಲ್ಲಿ 5957 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ. ಈ ವರ್ಷ ಅಕಾಲಿಕವಾಗಿ ಸುರಿದ ಮಳೆ ರೈತರನ್ನು ಕಂಗಾಲು ಮಾಡಿದೆ. ರೈತರಿಗೆ ಪರಿಹಾರ ನೀಡಬೇಕಾಗಿರುವ ಸರ್ಕಾರ ಜಿಲ್ಲಾಧಿಕಾರಿಗಳು ನೀಡುವ ವರದಿಯನ್ನು ಕಾಯುತ್ತಿದೆ.
Discussion about this post