ಲೋಕಸಭೆ ಚುನಾವಣೆ ನಂತರ ಎರಡನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರತಿ ತಿಂಗಳ ಕೊನೆಯ ಭಾನುವಾರದ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ ನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಪುನರಾರಂಭಿಸಿದ್ದಾರೆ.
ಭಾಷಣದಲ್ಲಿ ಅವರು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಅದರಲ್ಲು ನೀರಿನ ಕುರಿತಂತೆ ಅವರು ಮಾತನಾಡಿರುವುದು ಪ್ರಸ್ತುತ ಪರಿಸ್ಥಿತಿಗೆ ಮಹತ್ವದ್ದು ಅನ್ನಿಸಿಕೊಂಡಿದೆ.
ಮನೆಯ ಅಂದ ಹೆಚ್ಚಿಸುವ ಪಿಠೋಪಕರಣಗಳು ಯಾವುದು…?
ನೀರು ಉಳಿಸಲು ಇಂತಹುದೇ ಅನ್ನುವ ನಿರ್ಧಿಷ್ಟ ಸೂತ್ರ ಅಥವಾ ಮಾರ್ಗವಿಲ್ಲ. ದೇಶದ ನಾನಾ ಭಾಗಗಳಲ್ಲಿ ನಾನಾ ರೀತಿಯಲ್ಲಿ ನೀರುಳಿಸುವ ಕಾರ್ಯ ನಡೆಯುತ್ತಿದೆ. ಹೀಗಾಗಿ ಸ್ಥಳೀಯ ಅಗತ್ಯಗಳಿಗೆ ತಕ್ಕಂತೆ ನೀರುಳಿಸುವ ವ್ಯವಸ್ಥೆ ರೂಪುಗೊಳ್ಳಬೇಕಿದೆ. ಒಟ್ಟಿನಲ್ಲಿ ಹನಿ ಹನಿ ನೀರುಳಿಸುವುದು ನಮ್ಮ ಧ್ಯೇಯವಾಗಬೇಕು.
ಹೊಸ ಲ್ಯಾಪ್ ಟಾಪ್ ಖರೀದಿಸುವ ಯೋಚನೆಯಲ್ಲಿದ್ದೀರಾ…
ನೀರು ಸಂರಕ್ಷಿಸುವ ಸಲುವಾಗಿ ಸ್ವಚ್ಚ ಭಾರತ ಮಾದರಿಯಲ್ಲಿ ದೊಡ್ಡ ಚಳವಳಿಯ ಅಗತ್ಯವಿದೆ ಅಂದ ಮೋದಿ, ಜಲ ಸಂರಕ್ಷಣೆಯ ಸಾಂಪ್ರದಾಯಿಕ ಜ್ಞಾನವನ್ನು ಹಂಚಿಕೊಳ್ಳಿ. ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಜಲಸಂರಕ್ಷಣೆಗಾಗಿ ಕೆಲಸ ಮಾಡುತ್ತಿದ್ದಲ್ಲಿ ಅದರ ಬಗ್ಗೆ ಮಾಹಿತಿ ಕೊಡಿ ಎಂದು ದೇಶದ ಜನತೆಯಲ್ಲಿ ಇದೇ ವೇಳೆ ಪ್ರಧಾನಿಯವರು ಮನವಿ ಮಾಡಿದ್ದಾರೆ.
ಸೆಲೆಬ್ರಿಟಿಗಳು ಸೇರಿದಂತೆ ಸಮಾಜದ ಎಲ್ಲಾ ವರ್ಗದ ಜನರು ದೇಶಾದ್ಯಂತ ನೀರಿನ ಮಹತ್ವ ಕುರಿತು ಅಭಿಯಾನ ಆರಂಭಿಸಬೇಕು. ಸ್ವಚ್ಛ ಅಭಿಯಾನ ರೀತಿಯಲ್ಲಿ ದೇಶಾದ್ಯಂತ ನೀರಿನ ಸಂರಕ್ಷಣೆ ಕುರಿತು ಅಭಿಯಾನ ಆರಂಭಿಸಿ.ಜನಶಕ್ತಿಜಲಶಕ್ತಿ ಹ್ಯಾಶ್ ಟ್ಯಾಗ್ ನ್ನು ಬಳಸಿ ನೀರಿನ ಸಂರಕ್ಷಣೆ ಕುರಿತು ನಿಮ್ಮ ವಿಷಯ ಮತ್ತು ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಅಪ್ ಲೋಡ್ ಮಾಡಿ ಎಂದು ಕರೆ ಕೊಟ್ಟಿದ್ದಾರೆ.
Discussion about this post