Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನಾನು ಪೋಸ್ಟ್ ಮ್ಯಾನ್ ಅಲ್ಲ… ಸಿಎಂ ಯಡಿಯೂರಪ್ಪ ವಿರುದ್ಧ ಗುಡುಗಿದ ಈಶ್ವರಪ್ಪ

Radhakrishna Anegundi by Radhakrishna Anegundi
April 2, 2021
in ಟಾಪ್ ನ್ಯೂಸ್
eshwarappa shimoga what-is-the-contribution-of-yuva-morcha-workers-to-bjp
Share on FacebookShare on TwitterWhatsAppTelegram

ಮೈಸೂರು : ಅನುದಾನ ಬಿಡುಗಡೆ ವಿಚಾರದಲ್ಲಿ ಸಿಎಂ ಯಡಿಯೂರಪ್ಪ ಮಾಡಿರುವ ತಾರತಮ್ಯದ ವಿರುದ್ಧ ಸಹಜವಾಗಿಯೇ ಸಿಡಿದೆದ್ದಿರುವ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ನಮ್ಮ ಇಲಾಖೆಗೆ ಅನ್ಯಾಯ ಮಾಡುತ್ತಿರುವುದ್ಯಾಕೆ ಎಂದು ನೇರವಾಗಿ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ನಾನು ರೆಬೆಲ್ ಆಗಿಲ್ಲ, ನಾನು ಪಕ್ಷಕ್ಕೆ, ಸಂಘಟನೆಗೆ ಸದಾ ಲಾಯಲ್. ನಾನು ಎಂದಿಗೂ ಪಕ್ಷ ಬಿಟ್ಟಿಲ್ಲ, ಬಿಡುವ ಚಿಂತನೆ ನಡೆಸಿಲ್ಲ, ನಡೆಸುವುದು ಕೂಡಾ ಇಲ್ಲ ಎಂದು ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಕೆಜೆಪಿ ಕಟ್ಟಿದ ಸಂದರ್ಭದಲ್ಲಿ ಯಡಿಯೂರಪ್ಪ ನಾನು ಈ ಜನ್ಮದಲ್ಲಿ ಬಿಜೆಪಿ ಸೇರಲ್ಲ ಅಂದಿದ್ದರು, ಆಗ ರಾಜ್ಯಾಧ್ಯಕ್ಷನಾಗಿದ್ದ ನಾನು ನನ್ನದೇ ಭಾಷೆಯಲ್ಲಿ ಉತ್ತರ ಕೂಡಾ ಕೊಟ್ಟಿದ್ದೆ.ಹೀಗಾಗಿ ನನ್ನ ಪಕ್ಷ ನಿಷ್ಠೆಯನ್ನು ಯಾರೂ ಕೂಡಾ ಪ್ರಶ್ನಿಸಬೇಡಿ ಎಂದು ಯಡಿಯೂರಪ್ಪ ಬೆಂಬಲಿಗರಿಗೆ ಖಡಕ್ಕ್ ಸಂದೇಶ ರವಾನಿಸಿದ್ದಾರೆ.

ಇದೇ ವೇಳೆ ಅನುದಾನ ಬಿಡುಗಡೆ ಕುರಿತಂತೆ ಮಾತನಾಡಿರುವ ಈಶ್ವರಪ್ಪ 1299 ಕೋಟಿ ಅನುದಾನವನ್ನು ಮುಖ್ಯಮಂತ್ರಿಗಳು ನೇರವಾಗಿ ಬಿಡುಗಡೆ ಮಾಡಿದ್ದಾರೆ. ಇದು ನಿಯಮಗಳ ಉಲ್ಲಂಘನೆಯಾಗುತ್ತದೆ. ಆ ಅನುದಾನವನ್ನು ನಮ್ಮ ಇಲಾಖೆಗೆ ಬಿಡುಗಡೆ ಮಾಡಲಿ. ಯಡಿಯೂರಪ್ಪನವರು ಯಾರಿಗೆಲ್ಲಾ ಹಂಚಲು ಹೇಳುತ್ತಾರೋ ಅವರಿಗೆ ನಾವು ಹಂಚುತ್ತೇವೆ.

ಈ ಹಿಂದೆ ಬಜೆಟ್ ನಲ್ಲಿ ಘೋಷಣೆ ಮಾಡಿದ ಸುಮಾರ್ಗ ಯೋಜನೆಗೆ ಬಿಡಿಗಾಸು ಬಂದಿಲ್ಲ. ಈ ಬಗ್ಗೆ ಹಣಕಾಸು ಇಲಾಖೆ ಹೊಂದಿರುವ ಯಡಿಯೂರಪ್ಪ ಅವರಿಗೆ ಹಲವಾರು ಪತ್ರಗಳನ್ನು ಬರೆಯಲಾಗಿದೆ. ಆದರೆ ಯಾವುದಕ್ಕೂ ಉತ್ತರ ಬಂದಿಲ್ಲ.

ಇನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಈ ಹಿಂದೆ ನಡೆದ  ಕಾಮಗಾರಿಗಳಿಗೆ ಹಣ ಬಿಡುಗಡೆಯಾಗಿಲ್ಲ. ಇದೇ ಬಿಲ್ ಮೊತ್ತ ನೂರಾರು ಕೋಟಿ ದಾಟಿದೆ ಎಂದು ತಮ್ಮ ಇಲಾಖೆ ಆಗುತ್ತಿರುವ ಅನ್ಯಾಯವನ್ನು ಈಶ್ವರಪ್ಪ ತೆರೆದಿಟ್ಟಿದ್ದಾರೆ.

ಇದೇ ವೇಳೆ ಯಡಿಯೂರಪ್ಪ ಅವರಿಗೂ ನನಗೂ ಯಾವುದೇ ವೈಯುಕ್ತಿಕ ದ್ವೇಷಗಳಿಲ್ಲ. ಒಂದೇ ತಟ್ಟೆಯಲ್ಲಿ ಊಟ ಮಾಡಿದವರು ನಾವು. ಪಕ್ಷ ಸಂಘಟನೆಯನ್ನು ಜೊತೆಗೆ ಮಾಡಿದ್ದೇವೆ. ವ್ಯವಹಾರದಲ್ಲಿ ಪಾಲುದಾರರಾಗಿದ್ದೆವು.

bsy
ನಾನು ಪೋಸ್ಟ್ ಮ್ಯಾನ್ ಅಲ್ಲ... ಸಿಎಂ ಯಡಿಯೂರಪ್ಪ ವಿರುದ್ಧ ಗುಡುಗಿದ ಈಶ್ವರಪ್ಪ 1

ಆದರೆ ನನಗೂ ಅವರಿಗೂ ಕೆಲ ವಿಚಾರಗಳಲ್ಲಿ ಭಿನ್ನಮತವಿರುವುದು ಹೌದು ಎಂದು ಒಪ್ಪಿಕೊಂಡಿರುವ ಈಶ್ವರಪ್ಪ, ನಾನು ಬರೆದ ಯಾವುದೇ ಪತ್ರಕ್ಕೂ ಯಡಿಯೂರಪ್ಪ ಉತ್ತರಿಸದೇ ನಿರ್ಲಕ್ಷ್ಯ ತೋರುತ್ತಿದ್ದಾರೆ ಅನ್ನುವುದನ್ನು ಒತ್ತಿ ಹೇಳಿದ್ದಾರೆ.

ಇನ್ನು ರಾಜ್ಯಪಾಲರಿಗೆ ಪತ್ರ ಬರೆದಿರುವ ಬಗ್ಗೆ ಉತ್ತರಿಸಿದ ಈಶ್ವರಪ್ಪ, ಅನೇಕ ಶಾಸಕರು, ಸಚಿವರು ರಾಜ್ಯಪಾಲರಿಗೆ ಬರೆದ ಪತ್ರವನ್ನು ದೂರು ಎಂದು ಭಾವಿಸಿದ್ದಾರೆ. ನಾನು ಯಡಿಯೂರಪ್ಪ ವಿರುದ್ದ ರಾಜ್ಯಪಾಲರಿಗೆ ದೂರು ಕೊಟ್ಟಿಲ್ಲ.

KS ESHWARAPPA
ನಾನು ಪೋಸ್ಟ್ ಮ್ಯಾನ್ ಅಲ್ಲ... ಸಿಎಂ ಯಡಿಯೂರಪ್ಪ ವಿರುದ್ಧ ಗುಡುಗಿದ ಈಶ್ವರಪ್ಪ 2

ರಾಜ್ಯಪಾಲರು ಈ ಹಿಂದೆ ಗುಜರಾತ್ ನಲ್ಲಿ 9 ಅವಧಿಗೆ ಹಣಕಾಸು ಸಚಿವರಾಗಿದ್ದವರು. ಅವರಿಗೆ ನಿಯಮಗಳೇನು ಅನ್ನುವುದು ಗೊತ್ತಿರುತ್ತದೆ. ಅನುದಾನ ಯಾವ ರೀತಿ ಬಿಡುಗಡೆಯಾಗಬೇಕು ಅನ್ನುವುದು ಗೊತ್ತಿದೆ. ಹೀಗಾಗಿ ನಮ್ಮ ಮುಖ್ಯಮಂತ್ರಿಗಳಿಗೆ ನಿಯಮದ ಅರಿವು ಮೂಡಿಸಿ ಎಂದು ಮನವಿ ಮಾಡಿದ್ದೇನೆ. ಜೊತೆಗೆ ನನಗೆ ಮಾರ್ಗದರ್ಶನ ಮಾಡಿ ಅಂತಾ ರಾಜಭವನಕ್ಕೆ ಹೋಗಿ ಭೇಟಿ ಮಾಡಿದ್ದೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಇನ್ನು ಸಂಪುಟದಲ್ಲಿ ಪೋಸ್ಟ್ ಮ್ಯಾನ್ ಆಗಿರಲು ಸಾಧ್ಯವಿಲ್ಲ, ಸಚಿವರಾಗಿ ಇಲಾಖೆಗೆ ಬಂದ ಅನುದಾನವನ್ನು ಹೇಗೆ ಎಲ್ಲಿ ಬಳಕೆ ಮಾಡಬೇಕು ಎಂದು ನಿರ್ಧರಿಸುವುದು ನನ್ನದೇ ಕರ್ತವ್ಯ ಅನ್ನುವ ಮೂಲಕ ಯಡಿಯೂರಪ್ಪ ವಿರುದ್ಧ ತೊಡೆ ತಟ್ಟಿದ್ದಾರೆ.

Tags: ಯಡಿಯೂರಪ್ಪks eshwarappaಅನುದಾನ
Share10TweetSendShare

Discussion about this post

Related News

Tomato Yield Makes Andhra Farmer Crorepati Andhra Pradesh farmer earns three crore in 45 days

ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ

mandya-bike-riders-ejured-while-wheeling-maddur-bike-car-accident

ಮದ್ದೂರಿನಲ್ಲಿ ವ್ಹೀಲಿಂಗ್ : ಕಾರಿಗೆ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ ಸೈಯದ್ ಶೋಹೆಬ್ ಗ್ಯಾಂಗ್

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್