ಉತ್ತರ ಕರ್ನಾಟಕದ ನೆರೆ ಸಂದರ್ಭದಲ್ಲಿ ತೆಪ್ಪಿ ಓಡಿಸಿ ಸುದ್ದಿಯಾಗಿದ್ದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಇಂದು ಮತ್ತೆ ಸುದ್ದಿಯಾಗಿದ್ದಾರೆ.
ಈ ಬಾರಿ ಸುದ್ದಿಯಾಗಿರುವುದು ರಾಷ್ಟ್ರಪತಿಗಳು ತುಘಲಕ್ ದರ್ಬಾರ್ ನಡೆಸಿದ್ದಾರೆ ಅನ್ನುವ ಮೂಲಕ.
ದಾವಣಗೆರೆಯಲ್ಲಿ ಅನರ್ಹ ಶಾಸಕರ ಪರ ಬ್ಯಾಟಿಂಗ್ ಮಾಡುವ ಸಂದರ್ಭದಲ್ಲಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ರೇಣುಕಾಚಾರ್ಯ ಹರಿಹಾಯುವ ಭರದಲ್ಲಿದ್ದರು.
ತಮ್ಮ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ ಎಂಬ ಕೊರಗಿನಿಂದ ಕಾಂಗ್ರೆಸ್ ಮತ್ತು ಜೆಡಿಎಸ್ನ 17 ಜನ ಶಾಸಕರು ರಾಜೀನಾಮೆ ನೀಡಿದ್ದಾರೆ.
ಆದರೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆಯನ್ನು ಅಂಗೀಕರಿಸದೆ ಕಾಂಗ್ರೆಸ್ ಏಜೆಂಟ್ರಂತೆ ವರ್ತಿಸಿ ಶಾಸಕರನ್ನು ಅನರ್ಹಗೊಳಿಸಿದರು. ರಾಷ್ಟ್ರಪತಿಗಳು ತುಘಲಕ್ ದರ್ಬಾರ್ ನಡೆಸಿದ್ದಾರೆ ಎಂದರು.
ಸ್ಪೀಕರ್ ತುಘಲಕ್ ದರ್ಬಾರ್ ನಡೆಸಿದ್ದಾರೆ ಅನ್ನಬೇಕಾಗಿದ್ದ ರೇಣುಕಾಚಾರ್ಯ ರಾಷ್ಟ್ರಪತಿಗಳ ಹೆಸರನ್ನು ಎಳೆದು ತಂದಿದ್ದಾರೆ.
ಒಬ್ಬ ಜವಾಬ್ದಾರಿಯುತ ಶಾಸಕರಾದವರು ಮಾಧ್ಯಮಗಳ ಮುಂದೆ ಮಾತನಾಡುವ ಸಂದರ್ಭದಲ್ಲಿ ಎಚ್ಚರವಾಗಿಲ್ಲ ಅಂದರೆ ಹೀಗಾಗುತ್ತದೆ.
Discussion about this post