ಮಂಗಳೂರು : ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮೃತಪಟ್ಟವಳನ್ನು ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲದ ಆಶ್ರಯ ಕಾಲೋನಿಯ ಪ್ರೇಕ್ಷಾ ಎಂದು ಗುರುತಿಸಲಾಗಿದೆ.
ಮಂಗಳೂರು ನಂತೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈಕೆ, ಕಾಲೇಜಿಗೆ ರಜೆ ಹಾಕಿ ಮನೆಯಲ್ಲಿ ಉಳಿದುಕೊಂಡಿದ್ದಳು.
ಪ್ರೇಕ್ಷಾ ಧಾರವಾಹಿ ಹಾಗೂ ಮಾಡೆಲಿಂಗ್ ಬಗ್ಗೆ ಆಸಕ್ತಿ ಹೊಂದಿದ್ದಳು ಎನ್ನಲಾಗಿದ್ದು, ಫೋಟೋ ಶೂಟ್ ಹಿನ್ನಲೆಯಲ್ಲಿ ಬೆಂಗಳೂರಿಗೆ ತೆರಳಲು ಸಿದ್ದತೆ ಮಾಡಿಕೊಂಡಿದ್ದಳು. ನಿಗದಿಯಂತೆ ಇಂದು ರಾತ್ರಿ ಆಕೆ ಬೆಂಗಳೂರಿಗೆ ತೆರಳಬೇಕಾಗಿತ್ತು.
ಆದರೆ ಅಂಗನವಾಡಿ ಕೆಲಸಕ್ಕೆ ತೆರಳಿದ್ದ ಪ್ರೇಕ್ಷಾ ತಾಯಿ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದ ವೇಳೆ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಈ ನಡುವೆ ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಮನೆಗೆ ಮೂವರು ಅಪರಿಚಿತರು ಬಂದಿದ್ದಾರೆ ಎನ್ನಲಾಗಿದ್ದು, ಮನೆಗೆ ಬಂದವರೇ ಈ ಕೃತ್ಯ ಎಸಗಿದ್ದಾರೆ ಅನ್ನುವ ಆರೋಪಗಳು ಕೇಳಿ ಬಂದಿದೆ.
ಇದೀಗ ಪೊಲೀಸರ ತನಿಖೆಯಿಂದಲೇ ಇದೊಂದು ಆತ್ಮಹತ್ಯೆಯೋ ಕೊಲೆಯೋ ಅನ್ನೋದು ಬಹಿರಂಗವಾಗಬೇಕಿದೆ.
ಈ ನಿಟ್ಟಿನಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಪೊಲೀಸರು ತನಿಖೆಗೆ ಪ್ರಾರಂಭಿಸಿದ್ದಾರೆ.
Discussion about this post