Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೊದಲ ದಿನವೇ ಮೋಡಿ ಮಾಡಿದ ಮೋದಿ : ಓಟು ಕೊಟ್ಟು ಗೆಲ್ಲಿಸಿದ್ದು ಸಾರ್ಥಕವಾಯ್ತು

Radhakrishna Anegundi by Radhakrishna Anegundi
June 1, 2019
in ದೇಶ
pmmodi
Share on FacebookShare on TwitterWhatsAppTelegram

ಎರಡನೇ ಅವಧಿಗೆ ಪ್ರಧಾನಿ ಹುದ್ದೆಗೆ ಏರಿರುವ ಮೋದಿ ಮೊದಲ ದಿನ ಅದ್ಯಾವ ನಿರ್ಧಾರ ಪ್ರಕಟಿಸುತ್ತಾರೆ ಅನ್ನುವ ಕುತೂಹಲವಿತ್ತು. ಸಂಪುಟ ಸಚಿವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಮೋದಿಯವರ ಸಂಪುಟ ಸಭೆ ಕೈಗೊಂಡ ನಿರ್ಣಯಗಳು ಇದೀಗ ಜನ ಮೆಚ್ಚುಗೆ ಪಡೆದಿದೆ.

ಆಗಬೇಕಾಗಿರುವುದು ಸಾಕಷ್ಟಿದೆ, ಆದರೂ ಆಗುವತ್ತ ಮುಂದಡಿ ಇಟ್ಟ ಕೆಲಸವನ್ನು ಶ್ಲಾಘಿಸಲೇಬೇಕು.

ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಸರಕಾರ ಆರಂಭದಲ್ಲೇ ದೇಶದ ರೈತರು, ವ್ಯಾಪಾರಿಗಳಿಗೆ ಭರ್ಜರಿ ಕೊಡುಗೆ ನೀಡಿದೆ. 
ಬಡ ರೈತರಿಗೆ ವರ್ಷಕ್ಕೆ 6,000 ರೂ. (ಮೂರು ಕಂತುಗಳಲ್ಲಿ) ನೀಡುವ ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಸಿದ್ಧಿ’ ಯೋಜನೆಯನ್ನು ಎಲ್ಲಾ ರೈತರಿಗೂ ವಿಸ್ತರಿಸಲಾಗಿದೆ. 

https://www.youtube.com/watch?v=RwUb5IlnAPQ

ಅಲ್ಲದೆ, 60 ವರ್ಷ ಮೇಲ್ಪಟ್ಟ ರೈತರು ಮತ್ತು ವ್ಯಾಪಾರಿಗಳಿಗೆ ಮಾಸಿಕ 3,000 ರೂ. ಪಿಂಚಣಿ ನೀಡುವ ವಿಶೇಷ ಯೋಜನೆಯನ್ನೂ ಸರಕಾರ ಘೋಷಿಸಿದೆ. 

ಶುಕ್ರವಾರ ನಡೆದ ಪ್ರಧಾನಿ ಮೋದಿ ಅವರ ನೂತನ ಸಚಿವ ಸಂಪುಟದ ಮೊದಲ ಸಭೆಯು ಈ ಕುರಿತ ನಿರ್ಣಯಗಳಿಗೆ ಅಂಗೀಕಾರ ದೊರೆತಿದೆ. 

ಸಂಪುಟ ಸಭೆಯ ಬಳಿಕ ನೂತನ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 

”ಪಿಎಂ-ಕಿಸಾನ್‌ ಯೋಜನೆ ವ್ಯಾಪ್ತಿ ವಿಸ್ತರಣೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಪರಿಷ್ಕೃತ ನಿಯಮಗಳಿಂದಾಗಿ ಈ ಇನ್ನೂ 2 ಕೋಟಿ ಹೆಚ್ಚು ಫಲಾನುಭವಿಗಳು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಇದರಿಂದ ಈ ಯೋಜನೆ ಮೇಲೆ ಸರಕಾರ ಮಾಡುತ್ತಿರುವ ವೆಚ್ಚವು 12,000 ಕೋಟಿ ರೂ.ನಷ್ಟು ಹೆಚ್ಚಾಗಲಿದೆ. 2019-20ರಲ್ಲಿ ಒಟ್ಟು 87,217 ಕೋಟಿ ರೂ.ಗಳನ್ನು ಇದಕ್ಕಾಗಿ ವೆಚ್ಚ ಮಾಡಲಾಗುತ್ತದೆ.

ಈ ಬಾರಿಯ ಬಜೆಟ್‌ನಲ್ಲಿ 75,000 ಕೋಟಿ ರೂ. ವೆಚ್ಚದ ‘ಪಿಎಂ-ಕಿಸಾನ್‌ ಸಮ್ಮಾನ್‌’ ಯೋಜನೆಯನ್ನು ಸರಕಾರ ಘೋಷಿಸಿತ್ತು. 2 ಎಕರೆಯವರೆಗೂ ಜಮೀನು ಹೊಂದಿರುವ ಸಣ್ಣ ಮತ್ತು ಮಧ್ಯಮ ಗಾತ್ರದ 12.5 ಕೋಟಿ ರೈತರಿಗೆ ಇದರ ಪ್ರಯೋಜನ ದೊರೆಯಲಿದೆ ಎಂದು ಸರಕಾರ ಹೇಳಿತ್ತು. ಇದೀಗ ಪಿಎಂ-ಕಿಸಾನ್‌ ಯೋಜನೆ ವಿಸ್ತರಣೆಯಿಂದ 14.5 ಕೋಟಿ ರೈತರು ಪ್ರಯೋಜನ ಪಡೆಯಲಿದ್ದಾರೆ.

ಇದೇ ವೇಳೆ, ”ಪ್ರಧಾನ ಮಂತ್ರಿ ಕಿಸಾನ್‌ ಪಿಂಚಣಿ ಯೋಜನೆ’ ಅಡಿಯಲ್ಲಿ ಬಡ ಮತ್ತು ಮಧ್ಯಮ ಗಾತ್ರದ ರೈತರಿಗೆ 60 ವರ್ಷ ದಾಟಿದ ಬಳಿಕ ಮಾಸಿಕ 3,000 ರೂ. ಪಿಂಚಣಿ ನೀಡುವ ಯೋಜನೆಯನ್ನೂ ಸಂಪುಟ ಅನುಮೋದಿಸಿದ್ದು,’ಪ್ರಧಾನ ಮಂತ್ರಿ ಕಿಸಾನ್‌ ಪಿಂಚಣಿ ಯೋಜನೆ’ಗೆ ನೋಂದಾಯಿಸಿಕೊಂಡ ರೈತರಿಗೆ 60 ವರ್ಷ ದಾಟಿದ ಬಳಿಕ ಮಾಸಿಕ 3,000 ರೂ. ನಿಶ್ಚಿತ ಪಿಂಚಣಿ ದೊರೆಯಲಿದೆ. ಆರಂಭಿಕವಾಗಿ ಈ ಯೋಜನೆಯು ಗರಿಷ್ಠ 5 ಕೋಟಿ ಸಣ್ಣ ಮತ್ತು ಮಧ್ಯಮ ಗಾತ್ರದ ರೈತರಿಗೆ ಲಭ್ಯವಾಗಲಿದೆ. ಮುಂದಿನ ಹಂತಗಳಲ್ಲಿ ಇದನ್ನು ವಿಸ್ತರಣೆ ಮಾಡಲಾಗುವುದು. ದೇಶಾದ್ಯಂತ 18ರಿಂದ 40 ವರ್ಷ ವಯಸ್ಸಿನ ರೈತರು ಸ್ವಯಂಪ್ರೇರಿತವಾಗಿ ಈ ಯೋಜನೆಗೆ ನೋಂದಾಯಿಸಿಕೊಳ್ಳಬಹುದು. ಚಂದಾದಾರರು ನಿಧನವಾದರೆ, ಅವರ ಸಂಗಾತಿಯು 50% ಪಿಂಚಣಿಯನ್ನು ಪಡೆಯಲಿದ್ದಾರೆ. ಪಿಎಂ-ಕಿಸಾನ್‌ ಯೋಜನೆಯಲ್ಲಿ ದೊರೆಯುವ ಹಣವನ್ನು ರೈತರು ಪಿಂಚಣಿ ಯೋಜನೆಯಲ್ಲಿ ತೊಡಗಿಸಬಹುದು ಎಂದು ಸರಕಾರ ಹೇಳಿದೆ. 

60 ವರ್ಷ ಮೇಲ್ಪಟ್ಟ ಎಲ್ಲಾ ಚಿಲ್ಲರೆ ವ್ಯಾಪಾರಿಗಳು, ಸ್ವಯಂ ಉದ್ಯೋಗಿಗಳಿಗೂ ಸರಕಾರ ಪಿಂಚಣಿ ಯೋಜನೆ ಘೋಷಿಸಿದೆ. ವಾರ್ಷಿಕ 1.5 ಕೋಟಿಗಿಂತಲೂ ಕಡಿಮೆ ಜಿಎಸ್ಟಿ ವಹಿವಾಟು ಹೊಂದಿರುವ ಮತ್ತು 18-40 ವಯಸ್ಸಿನ ವ್ಯಾಪಾರಿಗಳು ಈ ಯೋಜನೆಗೆ ನೋಂದಾಯಿಸಿಕೊಳ್ಳಬಹುದು. ವ್ಯಾಪಾರಿಗಳು ಕಂತುಗಳಲ್ಲಿ ತೊಡಗಿಸುವಷ್ಟೇ ಹಣವನ್ನೂ ಸರಕಾರವೂ ತೊಡಗಿಸಲಿದ್ದು, ವ್ಯಕ್ತಿಗೆ 60 ವರ್ಷ ತುಂಬಿದ ಬಳಿಕ ಮಾಸಿಕ 3,000 ರೂ. ಪಿಂಚಣಿ ನೀಡಲಾಗುವುದು. ಮುಂದಿನ 3 ವರ್ಷಗಳಲ್ಲಿ 5 ಕೋಟಿ ವ್ಯಾಪಾರಿಗಳು ಯೋಜನೆಯ ಪ್ರಯೋಜನ ಪಡೆಯುವ ವಿಶ್ವಾಸವನ್ನು ಸರ್ಕಾರ ಹೊಂದಿದೆ.

ಹುತಾತ್ಮ ಹೋಧರ ಮಕ್ಕಳಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು ಹೆಚ್ಚಿಸುವ ಮೂಲಕ ಸರಕಾರ ‘ದೇಶ ಕಾಯುವವರಿಗೆ ಮೊದಲ ಆದ್ಯತೆ’ ನೀತಿ ಅನುಸರಿಸಿದೆ. ‘ಪ್ರಧಾನ ಮಂತ್ರಿ ವಿದ್ಯಾರ್ಥಿವೇನ ಯೋಜನೆ’ ಅಡಿ ಹೆಣ್ಣು ಮಕ್ಕಳಿಗೆ ಮಾಸಿಕ ವಿದ್ಯಾರ್ಥಿ ವೇತನವನ್ನು 2,250ರಿಂದ 3,000 ರೂ.ಗೆ ಹೆಚ್ಚಿಸಲಾಗಿದೆ. ಹುಡುಗರ ವಿದ್ಯಾರ್ಥಿ ವೇತನವನ್ನು 2,000 ರೂ.ನಿಂದ 2,500ಕ್ಕೆ ಏರಿಸಲಾಗಿದೆ. ಹುತಾತ್ಮ ರಾಜ್ಯ ಪೊಲೀಸ್‌ ಸಿಬ್ಬಂದಿ ಕುಟುಂಬವನ್ನೂ ಯೋಜನೆ ವ್ಯಾಪ್ತಿಗೆ ಸೇರಿಸಲಾಗಿದೆ. 

ಸಾಕುಪ್ರಾಣಿಗಳಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಾಲು- ಬಾಯಿ ರೋಗ ಮತ್ತು ಜ್ವರದಿಂದ ಉಂಟಾಗುವ ಗರ್ಭಪಾತವನ್ನು (ಬ್ರೂಸೆಲೋಸಿಸ್) ಮುಂದಿನ ಐದು ವರ್ಷಗಳಲ್ಲಿ ಸಂಪೂರ್ಣ ನಿಮೂಲನೆ ಮಾಡಲು ಕೇಂದ್ರ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಇದಕ್ಕಾಗಿ -ಠಿ; 13,343 ಕೋಟಿ ಯೋಜನೆ ರೂಪಿಸಿದೆ. ಈ ಯೋಜನೆಯಡಿಯಲ್ಲಿ 30 ಕೋಟಿ ರಾಸು (ಹಸು, ಎತ್ತು, ಎಮ್ಮೆ,ಕೋಣ), 20 ಕೋಟಿ ಕುರಿ, ಮೇಕೆ ಮತ್ತು 1 ಕೋಟಿ ಹಂದಿಗಳಿಗೆ ಚುಚ್ಚುಮದ್ದು ನೀಡಲಾಗುತ್ತದೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಯೋಜನೆಯಾಗಿದ್ದರೂ ವಿಶೇಷ ಪ್ರಸಂಗಗಳಲ್ಲಿ ಕೇಂದ್ರ ಸರ್ಕಾರವೇ ಸಂಪೂರ್ಣ ಹಣ ಭರಿಸುತ್ತದೆ.

ShareTweetSendShare

Discussion about this post

Related News

Police station

Police station : ಪೊಲೀಸ್ ಠಾಣೆಯಲ್ಲಿ ವಿಡಿಯೋ ಚಿತ್ರೀಕರಣ ಅಪರಾಧವಲ್ಲ : ಬಾಂಬೆ ಹೈಕೋರ್ಟ್

karnataka election bjp secret team from delhi

Karnataka Election : ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

NDTV ಖರೀದಿಗಾಗಿ ಅದಾನಿ ಮಾಸ್ಟರ್ ಪ್ಲಾನ್ : ಮಾಧ್ಯಮ ಲೋಕದಲ್ಲಿ ಸಂಚಲನ ಮೂಡಿಸಿದ ನಡೆ

Youtube :ದೇಶ ವಿರೋಧಿ 8 ಯೂಟ್ಯೂಬ್ 1 ಫೇಸ್ ಬುಕ್ ಅಕೌಂಟ್ ಬಂದ್ : Ministry of I&Bಯಿಂದ ಆದೇಶ

Shrikant Tyagi : ಕಠಿಣ ಕ್ರಮ ಅಂದ್ರೆ ಇದಪ್ಪ : BJP ನಾಯಕನ ಮನೆಗೆ ಬುಲ್ಡೋಜರ್ ನುಗ್ಗಿಸಿದ ಯೋಗಿ

Agneepath naxal : ಅಗ್ನಿಪಥ ಹಿಂಸಾಚಾರದಲ್ಲಿ ನಕ್ಸಲ್ ಕೈವಾಡ

Amazon pressure cooker : ಕೆಟ್ಟು ಹೋದ ಕುಕ್ಕರ್ ಮಾರಿದ ಅಮೆಜಾನ್ 1 ಲಕ್ಷ ರೂಪಾಯಿ ದಂಡ

Karnataka BJP : ನಳಿನ್ ಕುಮಾರ್ ಕಟೀಲ್ ಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Eliminate fastag & toll plaza : ಕೆಲ ವರ್ಷಗಳಲ್ಲಿ ಟೋಲ್ ಗೇಟ್ ಗಳೇ ಮಾಯ

Amit shah : ಶೋಭಾ ಕರಂದ್ಲಾಜೆ ಭೇಟಿ ಬೆನ್ನಲ್ಲೇ ಅಮಿತ್ ಶಾ ಕಚೇರಿಗೆ ದೌಡಾಯಿಸಿದ ನಳಿನ್ ಕುಮಾರ್

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್