ನವದೆಹಲಿ : ಕೊರೋನಾಗೆ ಬಲಿಯಾದ ಕುಟುಂಬಕ್ಕೆ ಪರಿಹಾರ ನೀಡಲೇಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸ್ಪಷ್ಟ ನಿರ್ದೇಶನ ನೀಡಿರುವ ಸುಪ್ರೀಂಕೋರ್ಟ್, ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾರ್ಗಸೂಚಿಯಂತೆ ಪರಿಹಾರ ನೀಡಬೇಕಿದ್ದು, ಅರ್ಜಿ ಸಲ್ಲಿಸಿದ 30 ದಿನದೊಳಗೆ ಪರಿಹಾರವನ್ನು ನೀಡಬೇಕು ಹಾಗೂ ಪರಿಹಾರ ನೀಡುವ ಬಗ್ಗೆ ಕೇಂದ್ರ, ರಾಜ್ಯ ಸರ್ಕಾರಗಳು ಪ್ರಚಾರ ಮಾಡಬೇಕು ಎಂದು ಹೇಳಿದೆ.
ಇದೇ ವೇಳೆ ಮರಣ ಪ್ರಮಾಣಪತ್ರದಲ್ಲಿ ಸಾವಿಗೆ ಕೊರೋನಾ ಕಾರಣ ಅನ್ನುವುದು ನಮೂದಾಗಿಲ್ಲ ಅನ್ನುವ ಕಾರಣಕ್ಕೆ ಪರಿಹಾರವನ್ನು ನಿರಾಕರಿಸುವಂತಿಲ್ಲ. ಸಾವಿನ ಕಾರಣವನ್ನು ಸರಿಪಡಿಸುವ ಹೊಣೆ ಜಿಲ್ಲಾಧಿಕಾರಿಗಳದ್ದು ಎಂದು ನ್ಯಾ. ಎಂ.ಆರ್.ಶಾ ನೇತೃತ್ವದ ಪೀಠ ಆದೇಶ ನೀಡಿದೆ.
Discussion about this post