Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೃತ ನವೀನ್ ತಂದೆಗೆ ಪ್ರಧಾನಿ ಮೋದಿ ಕರೆ – ಎರಡೇ ಮಾತಿನಲ್ಲಿ ಮುಗಿದ ಸಂಭಾಷಣೆ

Radhakrishna Anegundi by Radhakrishna Anegundi
01-03-22, 10 : 58 pm
in ರಾಜ್ಯ
naveen sg yukren
Share on FacebookShare on TwitterWhatsAppTelegram

ಹಾವೇರಿ :  ಉಕ್ರೇನ್​ನ ಖಾರ್ಕಿವ್​ ನಗರದ ಮೇಲೆ ಇಂದು ಬೆಳಗ್ಗೆ ರಷ್ಯಾ ಸೇನೆ ನಡೆಸಿದ ವೈಮಾನಿಕ ಶೆಲ್​ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ಬಲಿಯಾಗಿದ್ದಾನೆ. ಮೃತಪಟ್ಟಿರುವ ವಿದ್ಯಾರ್ಥಿಯನ್ನು ಹಾವೇರಿ ಜಿಲ್ಲೆಯ ನಿವಾಸಿ ನವೀನ್ ಶೇಖರಪ್ಪ ಗ್ಯಾನಗೌಡರ್‌(21)​ ಎಂದು ಗುರುತಿಸಲಾಗಿದೆ.

ಕರೆನ್ಸಿ ವಿನಿಮಯ ಸಲುವಾಗಿ ತೆರಳಿದ್ದ ಸಂದರ್ಭದಲ್ಲಿ ಖಾರ್ಕಿವ್ ನಿಂದ 10.ಕಿ.ಮೀ ದೂರದಲ್ಲಿ  ಈ ದುರ್ಘಟನೆ ಸಂಭವಿಸಿದೆ. ನವೀನ್ ಉಕ್ರೇನ್ ನಲ್ಲಿ ನಾಲ್ಕನೇ ವರ್ಷದ ವೈದ್ಯಕೀಯ ವಿಜ್ಞಾನದಲ್ಲಿ ಓದುತ್ತಿದ್ದ ಎಂದು ಗೊತ್ತಾಗಿದೆ.

ಈ ನಡುವೆ ನವೀನ್ ಸಾವಿನ ಕುರಿತಂತೆ ತೀವ್ರ ಶೋಕ ವ್ಯಕ್ತವಾಗಿದ್ದು, ಭಾರತೀಯ ವಿದ್ಯಾರ್ಥಿ ಸಾವು ದುಃಖದ ವಿಚಾರ. ವಿದ್ಯಾರ್ಥಿಯ ಪೋಷಕರ ಜೊತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್​ ಬಗ್ಚಿ ಹೇಳಿದ್ದಾರೆ. ಜೊತೆಗೆ​ ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದು, ಇದು ಭೀಕರ ದುರಂತ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ದುಃಖ ಸಹಿಸೋ ಶಕ್ತಿಯನ್ನು ಭಗವಂತ ನೀಡಲಿ ಅಂದಿದ್ದಾರೆ.

This is an awful tragedy. My heart goes out to the family of the victim and the anxious families of all those still stuck in Ukraine. We must do everything possible to get them home. https://t.co/nmwAu9jL6F

— Shashi Tharoor (@ShashiTharoor) March 1, 2022

ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಕೂಡಾ ನವೀನ್ ತಂದೆಗೆ ಕರೆ ಮಾಡಿದ್ದು, ಕೇಂದ್ರ ಸರ್ಕಾರ ನಿಮ್ಮ ನೋವಿನಲ್ಲೂ ಭಾಗಿ ಅಂದಿದ್ದಾರೆ. ಜೊತೆಗೆ ಅಗತ್ಯ ಎಲ್ಲಾ ಸಹಕಾರಗಳನ್ನು ನಾವು ನೀಡುತ್ತೇವೆ ಎಂದು ಸಾಂತ್ವಾನ ಹೇಳಿದ್ದಾರೆ. ಮೋದಿಯ ಮಾತಿಗೆ ನವೀನ್ ತಂದೆ, ಶುಕ್ರಿಯ, ಪ್ರಣಾಮ್ ಸರ್ ಎಂದಷ್ಟೇ ಪ್ರತಿಕ್ರಿಯೆ ನೀಡಿದ್ದಾರೆ.

naveen sg
ಮೃತ ನವೀನ್ ತಂದೆಗೆ ಪ್ರಧಾನಿ ಮೋದಿ ಕರೆ – ಎರಡೇ ಮಾತಿನಲ್ಲಿ ಮುಗಿದ ಸಂಭಾಷಣೆ 1

ಮತ್ತೊಂದು ಕಡೆ ನವೀನ್ ಅವರ ತಂದೆ ಶೇಖರ್ ಗೌಡ ಅವರಿಗೆ ದೂರವಾಣಿ ಕರೆ ಮಾಡಿದ ಮುಖ್ಯಮಂತ್ರಿ ಬಸವರಾಜ‌‌ ಬೊಮ್ಮಾಯಿ ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ  ನಿಜಕ್ಕೂ ಇದು ದೊಡ್ಡ ದುರಂತ. ದೇವರು ನವೀನ್ ಆತ್ಮಕ್ಕೆ ಶಾಂತಿ ನೀಡಲಿ. ನವೀನ್ ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲಾ ಪ್ರಯತ್ನ ಸಾಗಿದೆ. ಈ ಕುರಿತು ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗುತ್ತಿದೆ ಅಂದಿದ್ದಾರೆ.

Tags: FEATURED
Share1TweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್