ಮಂಗಳೂರು : ಕರಾವಳಿ ಭಾಗದ ಲೋಕಸಭಾ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಉದ್ಧೇಶಿಸಿ ಅವರು ಮಾತನಾಡಲಿದ್ದಾರೆ.
ಮೋದಿ ಆಗಮನ ಹಿನ್ನಲೆಯಲ್ಲಿ ನಗರದಾದ್ಯಂತ ಪೊಲೀಸ್ ಭದ್ರತೆ ಬಿಗಿಗೊಳಿಸಲಾಗಿದೆ. 1500 ಪೊಲೀಸರು, 5 KSRP, 8 CRPF ತುಕಡಿಯನ್ನು ನಿಯೋಜನೆ ಮಾಡಲಾಗಿದೆ.
ಕಾರವಾರ, ಚಿಕ್ಕಮಗಳೂರಿನ ಕೆಲ ಪೊಲೀಸ್ ಅಧಿಕಾರಿಗಳನ್ನೂ ಕೂಡಾ ಮಂಗಳೂರಿಗೆ ಕರೆಸಿಕೊಳ್ಳಲಾಗಿದೆ.
ಇನ್ನು ಮೋದಿ ಆಗಮನ ಹಿನ್ನೆಲೆಯಲ್ಲಿ ಮುಂಜಾಗ್ರತ ನಗರದ ಎಲ್ಲಾ ವೈನ್ ಶಾಪ್ ಹಾಗೂ ಬಾರ್ಗಳನ್ನು ಬಂದ್ ಮಾಡಲು ಮಂಗಳೂರು ಕಮಿಷನರ್ ಸಂದೀಪ್ ಪಾಟೀಲ್ ಆದೇಶಿಸಿದ್ದಾರೆ.
ಮೋದಿ ಬರುತ್ತಾರೆ ಎಂದು ಅಭಿಮಾನಿಗಳು ಖುಷಿಯಾದ್ರೆ, ಅಯ್ಯೋ ಮೋದಿ ಬಂದ್ರಲ್ಲ ಎಂದು ಕುಡುಕರು ಬೇಸರ ಪಟ್ಟುಕೊಳ್ಳುವಂತಾಗಿದೆ.
Discussion about this post