ಬಿರಿಯಾನಿ ಮೊಬೈಲ್ ಕೊಟ್ಟು ಶಿಕ್ಷಿಸುವ ವಿಚಾರ ರಾಜ್ಯಕ್ಕೆ ಗೊತ್ತು…ಬೇರೆ ಏನಾದ್ರು ಫೋಸ್ಟ್ ಹಾಕಿ….Praveen Nettar Murder
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಅಂಗಡಿ ಮುಚ್ಚಿ ಮನೆಗೆ ತೆರಳಲು ಸಜ್ಜಾಗುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಚ್ಚು ತಲವಾರುಗಳಿಂದ ಹಲ್ಲೆ (Praveen Nettar Murder) ನಡೆಸಿ ಪರಾರಿಯಾಗಿದ್ದಾರೆ.
ಈ ವೇಳೆ ತಲೆ ಭಾಗಕ್ಕೆ ಗಂಭೀರವಾಗಿ ಗಾಯಗೊಂಡ ನೆಟ್ಟಾರು ಅವರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ತೀವ್ರ ರಕ್ತ ಹರಿದು ಹೋಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿಯೇ ಅವರು ಮೃತಪಟ್ಟಿದ್ದಾರೆ.(Praveen Nettar Murder)
ಇದನ್ನೂ ಓದಿ : snakebite : ಮೂರೇ ದಿನದಲ್ಲಿ ಸೇಡು ತೀರಿಸಿಕೊಂಡ ನಾಗಿಣಿ : ಉತ್ತರ ಪ್ರದೇಶದಲ್ಲೊಂದು ವಿಚಿತ್ರ ಘಟನೆ
ಈ ನಡುವೆ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿಗಳು ಮಾಡಿದ ಟ್ವೀಟ್ ಗೆ ಇದೀಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಫೇಸ್ ಬುಕ್ ಮತ್ತು ಟ್ವೀಟರ್ ನಲ್ಲಿ ಪ್ರತಿರೋಧದ ಪ್ರತಿಕ್ರಿಯೆಗಳು ಬಂದಿದೆ.
ಕೆಲವರು ಹರ್ಷನ ಕೊಲೆಗಾರರನ್ನು ಜೈಲಿನಲ್ಲಿ ಮೊಬೈಲ್ ಬಿರಿಯಾನಿ ಜೊತೆಗೆ ಎಂಜಾಯ್ ಮಾಡಲು ಬಿಟ್ರೆ ಇನ್ನೇನು ಆಗಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ :Raichur news : ನಾಪತ್ತೆಯಾದ ನಾಲ್ವರು ವಿದ್ಯಾರ್ಥಿನಿಯರು ಪತ್ತೆ
ಕೇವಲ ಮುಖ್ಯಮಂತ್ರಿ ಮಾತ್ರವಲ್ಲ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ , ಸಿಟಿ ರವಿ ಹೀಗೆ ಸಾಲು ಸಾಲು ಬಿಜೆಪಿ ನಾಯಕರ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಕಾರ್ಯಕರ್ತರ ಆಕ್ರೋಶವನ್ನು ನೋಡಬಹುದಾಗಿದೆ.
Discussion about this post