ಕೊರೋನಾ ಸಮಯದಲ್ಲಿ ಪ್ಲಾಸ್ಮಾ ದಾನ ಮಾಡಿದ್ದ ಸ್ಯಾಂಡಲ್ ವುಡ್ ನಟಿ ಕಾವ್ಯಾ ಶಾಸ್ತ್ರಿ ಬಳಿಕ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿ ಮಾದರಿಯಾಗಿದ್ದರು.
ನಿರೂಪಕಿಯಾಗಿ ವೇದಿಕೆಯಲ್ಲಿ ಮಿಂಚುತ್ತಿದ್ದ ಕಾವ್ಯಾಶಾಸ್ತ್ರಿ, ಶುಭವಿವಾಹ ಅನ್ನುವ ಧಾರವಾಹಿ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮನ ಗೆದ್ದಿದ್ದರು. ಈ ಧಾರವಾಹಿ ಕಾವ್ಯಾ ಅವರಿಗೆ ದೊಡ್ಡ ಮಟ್ಟದಲ್ಲಿ ಹೆಸರು ಕೂಡಾ ತಂದುಕೊಟ್ಟಿತ್ತು. ಬಳಿಕ ಬಿಗ್ ಬಾಸ್ ಸೀಸನ್ 4 ರಲ್ಲಿ ಕಾಣಿಸಿಕೊಂಡಿದ್ದ ಕಾವ್ಯಾ ಶಾಸ್ತ್ರಿ ಸಿಕ್ಕಾಪಟ್ಟೆ ತೆಳ್ಳಗಾಗಿದ್ದರು.
ಇದಾದ ಬಳಿಕೆ ಯಾವುದೇ ಪ್ರಾಜೆಕ್ಟ್ ಒಪ್ಪಿಕೊಳ್ಳದ ಕಾವ್ಯಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದರು.
ಇದೀಗ ಕಾವ್ಯ ನಟನೆಗೆ ಮರಳಿದ್ದು, ಒಂದು ಚಿಕ್ಕ ಬ್ರೇಕ್ ಬಳಿಕ ಕಂಬ್ಯಾಕ್ ಮಾಡುತ್ತಿದ್ದಾರೆ. ರಾಧಿಕ ಅನ್ನುವ ಪ್ರಾಜೆಕ್ಟ್ ಒಪ್ಪಿಕೊಂಡಿರುವ ಅವರು, ನರ್ಸ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಂದ ಹಾಗೇ ಈ ಧಾರವಾಹಿಯನ್ನು ದರ್ಶಿತ್ ಭಟ್ ನಿರ್ದೇಶನ ಮಾಡಲಿದ್ದಾರೆ.
Discussion about this post