ರಾಘವೇಂದ್ರ ಚಿತ್ರವಾಣಿ ಸಂಸ್ಥೆ 44ನೇ ವಾರ್ಷಿಕೋತ್ಸವ ಮತ್ತು 20ನೇ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು.
ಚಿತ್ರರಂಗದ ಸಾಧಕರಾದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಹಿರಿಯ ಪತ್ರಕರ್ತ ಬಾಬು ಕೃಷ್ಣಮೂರ್ತಿ, ಹಿರಿಯ ಸಂಗೀತ ನಿರ್ದೇಶಕಿ ಇಂದೂ ವಿಶ್ವನಾಥ್, ನಿರ್ಮಾಪಕ ಎನನ್ ಕುಮಾರ್ ಅವರಿಗೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇದೇ ವೇಳೆ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಇಂದ್ರಜಿತ್ ಲಂಕೇಶ್, ನಾನು ವಿಷ್ಣುವರ್ಧನ್ ಜೊತೆಗೆ ಕ್ರಿಕೆಟ್ ಆಡಿದ್ದೆ, ಅವರೊಂದಿಗೆ ಸಿಕ್ಕಾಪಟ್ಟೆ ಒಡನಾಟವಿತ್ತು. ಆದರೆ ಅವರ ಚಿತ್ರವೊಂದನ್ನು ನಿರ್ದೇಶಿಸಲು ನನಗೆ ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅವರ ಚಿತ್ರ ನಿರ್ದೇಶಿಸಲು ಸಾಧ್ಯವಾಗಲಿಲ್ಲ ಅನ್ನುವ ಬೇಸರದ ನಡುವೆಯೂ ಅವರ ಅಣ್ಣನ ಹೆಸರಿನಲ್ಲಿ ನೀಡುವ ಪ್ರಶಸ್ತಿ ಸಿಕ್ಕಿರುವುದು ನನ್ನ ಪುಣ್ಯ ಅಂದರು
Discussion about this post