ಬೆಂಗಳೂರು : ಮಕ್ಕಳಿಗೆ ಮದ್ಯಕುಡಿಸಿ ವಿಕೃತಿ ಮೆರೆದ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಕೋಡಿ ಹಳ್ಳಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.
ಬಂಧಿತ ಅರುಣ್ ಕುಮಾರ್ ನನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ಇನ್ನಿಬ್ಬರು ಪರಾರಿಯಾಗಿದ್ದು ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ರಾಮನಗರದ ಮರಳಿಪುರ ಗ್ರಾಮದ ತೋಟದ ಮನೆಯೊಂದರಲ್ಲಿ ಅಪ್ರಾಪ್ತ ಬಾಲಕರಿಗೆ ಊಟದ ಜೊತೆಗೆ ಮದ್ಯ ಕುಡಿಸಿ, ಬಳಿಕ ಅವರು ಅಮಲಿನಲ್ಲಿ ತೂರಾಡುತ್ತಿರುವುದನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾಗಿತ್ತು.
ಒಟ್ಟು 7 ಮಕ್ಕಳಿಗೆ ಮದ್ಯ ಕುಡಿಸಿರುವುದು ದೃಢಪಟ್ಟಿದ್ದು, ಈ ಹಿಂದೆಯೂ ಇವರು ಇಂತಹುದೇ ಕೃತ್ಯಗಳನ್ನು ಎಸಗಿದ್ದಾರೆ ಎನ್ನಲಾಗಿದೆ.
Discussion about this post