ಬೆಂಗಳೂರು : ಜಾರಕಿಹೊಳಿ ಸಿಡಿ ಪ್ರಕರಣದ ಬಳಿಕ ಮಾತನಾಡಿದ್ದ ಡಿಕೆ ಶಿವಕುಮಾರ್ ಸಿಡಿ ಪ್ರಕರಣದಲ್ಲಿ ನನ್ನ ಸಿಲುಕಿಸಲು ನೋಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದರು.
ನನ್ನ ವಿರುದ್ಧ ಹಿಂದೆ ಮಾಡಿದ್ದ ಷಡ್ಯಂತ್ರಗಳನ್ನು ಈಗ್ಲೂ ಮುಂದುವರಿಸಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಕೆಲ ದಿನಗಳ ಹಿಂದೆ ಆರೋಪಿಸಿದ್ದರು.
ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಕುಂಬಳಕಾಯಿ ಕಳ್ಳ ಅಂದ್ರೆ ನೀವ್ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದ್ದರು.
ಆದರೆ ಇದೀಗ ರಾಜ್ಯ ಬಿಜೆಪಿಯ ಅಧಿಕೃತ ಟ್ವೀಟರ್ ಖಾತೆಯಿಂದ ಮಾಡಿರುವ ಟ್ವೀಟ್ ನೋಡಿದ್ರೆ ಡಿಕೆ ಶಿವಕುಮಾರ್ ಕೊಟ್ಟಿರುವ ಹೇಳಿಕೆ ಸತ್ಯ ಅನ್ನುವಂತಿದೆ.
ಸಿಡಿ ಪ್ರಕರಣದ ಕಿಂಗ್ ಪಿನ್ ನಂಬರ್ 1 ಹಾಗೂ ಡಿಕೆ ಶಿವಕುಮಾರ್ ಜೊತೆಗಿರುವ ಫೋಟೋ ಟ್ವೀಟ್ ಮಾಡಿರುವ ಬಿಜೆಪಿ ಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ನನ್ನನ್ನು ಸಿಲುಕಿಸುವ ಕುತಂತ್ರ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? ಎಂದು ಪ್ರಶ್ನಿಸಿದೆ.
ಬಿಜೆಪಿ ನಿನ್ನೆಯಿಂದ ಮಾಡುತ್ತಿರುವ ಟ್ವೀಟ್ ಗಳನ್ನು ನೋಡಿದರೆ, ಡಿಕೆ ಶಿವಕುಮಾರ್ ಅವರನ್ನು ನೇರವಾಗಿ ಎದುರಿಸಲು ಬಿಜೆಪಿ ಪೇಚಾಡುತ್ತಿರುವಂತೆ ಕಾಣಿಸುತ್ತಿದೆ. ಡಿಕೆಶಿಯನ್ನು ಎದುರಿಸಬಲ್ಲ ನಾಯಕನ ಕೊರತೆ ಬಿಜೆಪಿಗೆ ಕಾಡುತ್ತಿರುವುದು ಸ್ಪಷ್ಟ.
ಸಿಡಿ ಪ್ರಕರಣದಲ್ಲಿ ಡಿಕೆಶಿ ಹೆಸರಿದೆ ಅನ್ನುವ ಸಂಶಯವಿದ್ರೆ, ಡಿಕೆಶಿಯನ್ನೂ ತನಿಖೆಗೆ ಒಳಪಡಿಸಿ ಎಂದು ಬಿಜೆಪಿ ಅಗ್ರಹಿಸಬಹುದು ತಾನೇ.
ಯಾರ ಜೊತೆಗೋ ಫೋಟೋ ಇದ್ದಾಕ್ಷಣ ಅಪರಾಧವಾಗೋದಿಲ್ಲ ಎಂದು ವಂಚನೆ ಆರೋಪ ಎದುರಿಸುತ್ತಿರುವ ಯುವರಾಜ್ ಜೊತೆಗೆ ಸೋಮಣ್ಣ ಇದ್ದ ಫೋಟೋ ವೈರಲ್ ಆದ ವೇಳೆ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದು ಬಿಜೆಪಿ ನಾಯಕರಿಗೆ ಮರೆತು ಹೋಗಿರುವಂತಿದೆ.
Discussion about this post