ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಮಾಡಿ, ವಿಡಿಯೋ ಕರೆ ಮೂಲಕ ಆಶ್ಲೀಲ ಮಾತು ನಗ್ನವಾಗಿ ಮಾತನಾಡಲು ಪುಸಲಾಯಿಸಿ ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ದೂರು.
ಮಾನ್ಯರೇ,
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಾನು ಬೆಂಗಳೂರು ನಗರಕ್ಕೆ ಉದ್ಯೋಗ ಹುಡುಕಿಕೊಂಡು ಬಂದು ನೆಲೆಸಿದ್ದು ಕಿರುಚಿತ್ರ ಮಾಡುವ ಸಲುವಾಗಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿದ್ದು ನಂತರ ಅವರು ನನ್ನ ಮೊಬೈಲ್ ನಂಬರ್ ಪಡೆದು ಕರೆ ಮಾಡುವುದಾಗಿ ತಿಳಿಸಿದರು.
ನಂತರ ಅವರು ಕರೆ ಮಾಡಿ ನನ್ನ ಬಗ್ಗೆ ಕುಟುಂಬದ ಬಗ್ಗೆ ವಿಚಾರಿಸಿ ಸಲುಗೆಯಿಂದ ಮಾತನಾಡಲು ಪ್ರಾರಂಭಿಸಿದರು. ಸಚಿವರು ನನ್ನನ್ನು ಅಷ್ಟು ಕಾಳಜಿಯಿಂದ ಮಾತನಾಡಿಸಿದ್ದು ನನಗೆ ತುಂಬಾ ಖುಷಿಯಾಗಿ ಅವರನ್ನು ಗೌರವದಿಂದ ಮಾತನಾಡಿಸಿದೆ.
ಆಗಾಗ್ಗೆ ನನಗೆ ಕರೆ ಮಾಡಿ ಮಾತನಾಡಲು ಆರಂಭಿಸಿದರು. ನನಗೆ ತಮ್ಮ ಪ್ರಭಾವ ಬಳಸಿ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿದರು. ಆದರೆ ನೌಕರಿ ಕೊಡಿಸುವ ಬದಲಾಗಿ ನೀನು ನನ್ನ ಜೊತೆ ಎಲ್ಲಾ ರೀತಿಯ ಸಹಕಾರ ನೀಡಬೇಕು ಎಂದು ಕೇಳಿದರು.
ಅವರನ್ನು ಟಿವಿಗಳಲ್ಲಿ ನೋಡಿದ್ದು ಮಂತ್ರಿ ಈ ರೀತಿ ಹೇಳಿದ ಮೇಲೆ ಕೆಲಸ ಕೊಟ್ಟೆ ಕೊಡಿಸುತ್ತಾರೆ ಎಂದು ನಂಬಿದ ನನ್ನ ಬಳಿ ಕೊಡಲು ಲಕ್ಷಾಂತರ ಹಣವಿಲ್ಲದೆ ಇರುವುದನ್ನು ಮುಂಚೆಯೇ ತಿಳಿದುಕೊಂಡು ಹಣದ ಬದಲು ಅವರ ಜೊತೆ ಸಹಕರಿಸಿ ಖುಷಿ ನೀಡಬೇಕು ಎಂದು ಕೇಳಿದ್ದರಿಂದ ನಂಬಿ ಅವರು ಕೇಳಿದಂತೆ ನಡೆದುಕೊಂಡು ಬಂದೆ.
ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಂಡಿದ್ದೇನೆ ಎಂದು ವಿಡಿಯೋ ಕರೆ ಮಾಡಿ ನನ್ನೊಂದಿಗೆ ಲೈಂಗಿಕ ವಿಚಾರಗಳನ್ನು ಮಾತನಾಡಿ ನನಗೆ ಬಟ್ಟೆ ತೆಗೆದು ನಗ್ನಳಾಗಿ ಖಾಸಗಿ ಅಂಗಗಳನ್ನು ತೋರಿಸುವಂತೆ ಕೇಳಿದರು.ನಾನು ಅವರು ಹೇಳಿದಂತೆಯೇ ಮಾಡಿದೆ.
……..XXXXXXXXX
ನಂತರ ಬೆಂಗಳೂರಿಗೆ ಬಂದು ನನ್ನ ನಿವಾಸಕ್ಕೆ ಬಾ ಮಾತನಾಡಬೇಕು ನಿನ್ನ ಕೆಲಸದ ವಿಚಾರ ಎಂದರು. ನಾನು ಅವರು ಹೇಳಿದ ಅಪಾರ್ಟ್ ಮೆಂಟ್ ಗೆ ಹೋದೆ. ಅವರು ನನ್ನೊಂದಿಗೆ ಇದೇ ರೀತಿ ಎರಡು ಬಾರಿ ಆಪಾರ್ಟ್ ಮೆಂಟ್ ಗೆ ಕರೆಸಿ ಲೈಂಗಿಕ ಕ್ರಿಯೆ ನಡೆಸಿ ಅಶ್ಲೀಲವಾಗಿ ಮಾತನಾಡಿದ್ದಾರೆ. ……..XXXXXXXXX
ನಾನು ಎದುರು ಮಾತನಾಡಲು ಹೆದರಿ ಅವರು ಕೇಳಿದಂತೆ ಮಾಡಿರುತ್ತೇನೆ. ನಂತರ ಸರ್ಕಾರಿ ನೌಕರಿ ಬಗ್ಗೆ ಕೇಳಿದಾಗ ಸ್ಪಲ್ಪ ಹಣ ಬೇಕಾದರೆ ಕೇಳು ಕೆಲಸದ ಕಥೆ ಆಮೇಲೆ ನೋಡೋಣ ಎಂದು ಅವಾಯ್ಡ್ ಮಾಡುತ್ತಿದ್ದರು.
ನಾನು ಯಾವಾಗ ಅವರಿಗೆ ನನ್ನನು ಹೇಗೆ ಬೇಕೋ ಹಾಗೆ ಬಳಸಿಕೊಂಡು ಈಗ ಯಾಕೆ ಕೆಲಸ ಕೊಡುತ್ತಿಲ್ಲ ಎಂದು ಕೇಳಿದಾಗ ……..XXXXXXXXX ಎಂದು ಬೈಯ್ದು ಕಳುಹಿಸಿದರು.
ಇದಾದ ನಂತರ ಅವರೊಂದಿಗೆ ನಾನು ಮಾತನಾಡಿದ ಮತ್ತು ಅಶ್ಲೀಲ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.
ನಾನು ಇವರ ವಿರುದ್ಧ ದೂರು ನೀಡಿದಂತೆ ಈ ರೀತಿ ಕುತಂತ್ರವನ್ನು ರಮೇಶ್ ಜಾರಕಿಹೊಳಿ ಮಾಡಿರುತ್ತಾರೆ. ಹಣವಂತರು ಪ್ರಭಾವಿಗಳಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಂದ ನನಗೂ ಮತ್ತು ನನ್ನ ಕುಟುಂಬದ ಸದಸ್ಯರಿಗೂ ಜೀವ ಬೆದರಿಕೆ ಇದೆ.
ನಾನು ದೂರು ನೀಡದಂತೆ ತಡೆಯಲು ಮತ್ತು ಕೈಗೆ ಸಿಕ್ಕರೆ ಕೊಂದು ಬಿಡಲು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ದಯಮಾಡಿ ತಾವು ನನಗೆ ಮತ್ತು ನನ್ನ ಕುಟುಂಬದ ಸದಸ್ಯರಿಗೆ ಭದ್ರತೆ ನೀಡಿ. ರಮೇಶ್ ಜಾರಕಿಹೊಳಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ.
ನಾನು ನೇರವಾಗಿ ಯಾವ ಠಾಣೆಗೂ ಬಂದು ದೂರು ನೀಡದಂತೆ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳುತ್ತಿದ್ದಾರೆ. ನನ್ನ ಪರವಾಗಿ ಯಾರೂ ಮಾತನಾಡದಂತೆ ತೇಜೋವಧೆ ಮಾಡುತ್ತಿದ್ದಾರೆ. ಹಾಗೂ ನನಗೆ ಸಹಾಯ ಮಾಡಿದವರಿಗೆ ಮಾಡುತ್ತಿದವರಿಗೆ ಟಾರ್ಗೇಟ್ ಮಾಡಿ ಅವರ ಮನೆ ಮತ್ತು ಕುಟುಂಬಸ್ಥರಿಗೆ ಹಿಂಸೆ ಕೊಡುತ್ತಿರುವುದರಿಂದ ಬಹಳ ನೋವಾಗಿದೆ.
ನನಗೆ ಭದ್ರತೆ ಇಲ್ಲದ ಕಾರಣ ಕೈಯಲ್ಲಿ ಬರೆದು ಈ ದೂರನ್ನು ನನಗೆ ಪರಿಚಿತರಾದ ವಕೀಲ ಜಗದೀಶ್ ಅವರ ಮೂಲಕ ಕಳುಹಿಸುತ್ತಿದ್ದೇನೆ.
Discussion about this post