ಶಿವಮೊಗ್ಗ : ಕೊರೋನಾ ಕಾರಣದಿಂದ ನಿಂತುಹೋಗಿದ್ದ ಸಪ್ತಪದಿ ಯೋಜನೆಯನ್ನು ಮತ್ತೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಸರ್ಕಾರದಿಂದಲೇ ಸರಳ ವಿವಾಹ ಕಾರ್ಯಕ್ರಮ ಶೀಘ್ರದಲ್ಲೇ ಪುನರಾರಂಭವಾಗಲಿದೆ ಅಂದರು.
ಮೊದಲ ಹಂತದಲ್ಲಿ ರಾಜ್ಯದ 100 ಮುಜರಾಯಿ ದೇವಸ್ಥಾನಗಳಲ್ಲಿ ಸರ್ಕಾರದಿಂದಲೇ ಸರಳ ವಿವಾಹ ನಡೆಯಲಿದೆ. ಈ ಯೋಜನೆಯಡಿ ಮದುವೆಯಾಗುವ ವಧುವಿಗೆ 40 ಸಾವಿರ ಮೌಲ್ಯದ ಬಂಗಾರ, 10 ಸಾವಿರ ಮೌಲ್ಯದ ಧಾರೆ ಸೀರೆ, ಹಾಗೂ ವರನಿಗೆ 5 ಸಾವಿರ ಮೌಲ್ಯದ ವಸ್ತ್ರ ನೀಡಲಾಗುವುದು ಎಂದರು.
ಸರಳ ವಿವಾಹ ಕಾರ್ಯಕ್ರಮ ಶೀಘ್ರದಲ್ಲೇ ಪುನರಾರಂಭ ಮಾಡಿಸುವ ನಿಟ್ಟಿನಲ್ಲಿ ಮಂಗಳ ಕಾರ್ಯಗಳಿಗೆ ಈಗಾಗಲೇ ಮುಹೂರ್ತ ನಿಗದಿ ಪಡಿಸಲಾಗಿದೆ. ಜೊತೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂದರು.
Discussion about this post