Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿದ್ದಗಂಗಾ ಶ್ರೀಗಳ ಹುಟ್ಟೂರಲ್ಲಿ ತಲೆ ಎತ್ತಲಿದೆ 111 ಅಡಿ ಎತ್ತರದ ಮೂರ್ತಿ

Radhakrishna Anegundi by Radhakrishna Anegundi
November 8, 2019
in ರಾಜ್ಯ
Share on FacebookShare on TwitterWhatsAppTelegram

ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳ ಹುಟ್ಟೂರಾದ ವೀರಾಪುರದ ಗ್ರಾಮವನ್ನು ಪಾರಂಪರಿಕ ಹಾಗೂ ವಿಶ್ವದರ್ಜೆಯ ಸಾಂಸ್ಕೃತಿಕ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಈಗಾಗಲೇ ₹ 25 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಶ್ರೀಗಳು 111 ವರ್ಷ ಜೀವಿಸಿ ಸಮಾಜದ ಒಳಿತಿಗೆ ತಮ್ಮ ಬದುಕನ್ನು ಸಮರ್ಪಿಸಿಕೊಂಡವರು. ಅದರ ಸವಿನೆನಪಿಗಾಗಿ ಇಲ್ಲಿ ಶ್ರೀಗಳ 111 ಅಡಿ ಎತ್ತರದ ಮೂರ್ತಿಯನ್ನು ಇಲ್ಲಿ ಸ್ಥಾಪಿಸಲಾಗುತ್ತಿದೆ. ಇದರೊಟ್ಟಿಗೆ ಗ್ರಾಮದಲ್ಲಿ ಇನ್ನೂ ಹತ್ತು ಹಲವು ಯೋಜನೆಗಳಿಗೆ ಇದೇ ಸಂದರ್ಭ ಚಾಲನೆ ದೊರೆಯಲಿದೆ.

ಶಿವಗಂಗೆ ಬೆಟ್ಟವು ಶಿವಕುಮಾರ ಶ್ರೀಗಳ ನೆಚ್ಚಿನ ತಾಣ. ಅದಕ್ಕೆ ಅಭಿಮುಖವಾಗಿಯೇ ಅವರು ತಪಸ್ಸು ಮಾಡುತ್ತಿದ್ದರು ಎನ್ನುವ ಪ್ರತೀತಿ ಇದೆ. ಹೀಗಾಗಿ ಬೆಟ್ಟಕ್ಕೆ ಅಭಿಮುಖವಾಗಿಯೇ ಶ್ರೀಗಳ ಪ್ರತಿಮೆ ತಲೆ ಎತ್ತಲಿದೆ. ಇಲ್ಲಿ ನಿರ್ಮಾಣ ಆಗಲಿರುವ 111 ಅಡಿ ಎತ್ತರದ ಪ್ರತಿಮೆಯು ರಾಜ್ಯದಲ್ಲಿಯೇ ಎರಡನೇ ಅತಿ ಎತ್ತರದ ಪ್ರತಿಮೆ ಆಗಲಿದೆ. ಗದಗದ ಭೀಷ್ಮ ಕೆರೆ ಅಂಗಳದಲ್ಲಿ ಬಸವೇಶ್ವರರ 116 ಅಡಿ ಎತ್ತರದ ಪ್ರತಿಮೆ ಈಗಾಗಲೇ ನಿರ್ಮಾಣ ಆಗಿದೆ.

ವೀರಾಪುರದಲ್ಲಿ ನಿರ್ಮಾಣ ಆಗಲಿರುವ ಪ್ರತಿಮೆಗೆ 30 ಅಡಿ ಎತ್ತರದ ಬಂಡೆಯಾಕಾರದ ತಳಪಾಯ ಕಟ್ಟಲಾಗುತ್ತದೆ. ಅದರ ಮೇಲೆ ಊರುಗೋಲು ಹಿಡಿದುಕೊಂಡಿರುವ ಕಾವಿದಾರಿ ಶ್ರೀಗಳ ಬೃಹತ್ ಪ್ರತಿಮೆ ಇರಲಿದೆ. ತಳಪಾಯದಲ್ಲಿ ಸಭಾಭವನ, ವಸ್ತು ಸಂಗ್ರಹಾಲಯ, ಧ್ಯಾನ ಕೊಠಡಿ ಇರಲಿವೆ.

ವಸ್ತು ಸಂಗ್ರಹಾಲಯದಲ್ಲಿ ಶ್ರೀಗಳ ಜೀವನವನ್ನು ತೋರಿಸುವ ಧ್ವನಿ ಬೆಳಕಿನ ಪ್ರಚಾರ ಇರಲಿದೆ. ಭಕ್ತರ ವಿಶ್ರಾಂತಿಗೆ ಆಸನಗಳು ಇರಲಿವೆ.

ಸಂಪೂರ್ಣವಾಗಿ ಕಾಂಕ್ರೀಟ್‌ ನಿರ್ಮಿತವಾಗಲಿರುವ ಪ್ರತಿಮೆಯು ಮಳೆ, ಬಿರುಗಾಳಿ, ಭೂಕಂಪನದಂತಹ ಪ್ರಕೃತಿ ವಿಕೋಪ ತಾಳಿಕೊಳ್ಳುವ ಶಕ್ತಿ ಹೊಂದಿದೆ. ಶ್ರೀಗಳ ಪ್ರತಿಮೆ ನಿರ್ಮಾಣ ಜವಾಬ್ದಾರಿಯನ್ನು ಪಿಎಸ್‍ಎಪಿ ಆರ್ಕಿಟೆಕ್ಟ್ ಕಂಪನಿಗೆ ನೀಡಲಾಗಿದೆ. ಈ ಸಂಸ್ಥೆಯು ಹಿಂದೆ ಗದಗದಲ್ಲಿ ಬಸವೇಶ್ವರರ ಪ್ರತಿಮೆ ಹಾಗೂ ಮಹದೇಶ್ವರ ಬೆಟ್ಟದಲ್ಲಿನ ಮಹದೇಶ್ವರ ಪ್ರತಿಮೆ ನಿರ್ಮಾಣ ಮಾಡಿದ ಅನುಭವ ಹೊಂದಿದೆ. ಎರಡೂವರೆ ವರ್ಷದ ಒಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ವೀರಾಪುರ ಗ್ರಾಮದಲ್ಲಿ ಶ್ರೀಗಳ ಪೂರ್ವಾಶ್ರಮದ ತಂದೆ ಮತ್ತು ತಾಯಿ ಸಮಾಧಿ ಇದ್ದು, ಇದರ ಬಳಿಯೇ ಶ್ರೀಗಳ ದೇವಾಲಯ ಸಹ ನಿರ್ಮಾಣ ಮಾಡಲಾಗುತ್ತದೆ. ಜೊತೆಗೆ ಮತ್ತೆ 2 ದೇಗುಲ ತಲೆ ಎತ್ತಲಿವೆ.

ShareTweetSendShare

Discussion about this post

Related News

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

Shashi Kumar BJP  : ಚಿತ್ರನಟ ಶಶಿಕುಮಾರ್ ಬಿಜೆಪಿಗೆ :  ಸೋಲಿನ ಭೀತಿಯ ಪಕ್ಷಕ್ಕೆ ಪಕ್ಷಾಂತರಿ ಎಕ್ಸ್ ಪರ್ಟ್

lokayukta : ಮೊದಲು ಎಸಿಬಿ ಈಗ ಲೋಕಾಯುಕ್ತ : ಬೆಸ್ಕಾಂ ಎಇ ತಿಂದು ತೇಗಿದೆಷ್ಟು..?

praveen nettar : ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ : ಆಕ್ರೋಶ ಶಮನಕ್ಕೆ ಕಣ್ಣೊರೆಸುವ ತಂತ್ರ

Karnataka Politics : ಕಟೀಲ್ ವಿದೂಷಕ : ಸಿದ್ದರಾಮಯ್ಯ ನರಹಂತಕ : ಪಾವನವಾಯ್ತು ಕರ್ನಾಟಕ

BJP Meeting : ಕಾಂಗ್ರೆಸ್ ಗೆ ತನಿಖೆ ಬೆದರಿಕೆ : ಕೈ ನಾಯಕರ ಬಾಯಿ ಮುಚ್ಚಿಸಲು ಬಿಜೆಪಿ ಹೊಸ ನಾಟಕ

Murugha Shree Arrest : ಕೊನೆಗೂ 6 ದಿನಗಳ ಬಳಿಕ ಮುರುಘಾ ಶ್ರೀಗಳನ್ನು ವಶಕ್ಕೆ ಪಡೆದ ಪೊಲೀಸರು

Muddahanume gowda : ಇದಪ್ಪ ರಾಜೀನಾಮೆ ಅಂದ್ರೆ : ಗೌರವಯುತವಾಗಿ ಕಾಂಗ್ರೆಸ್ ನಿಂದ ಹೊರ ಬರಲು ನಿರ್ಧರಿಸಿದ ಮುದ್ದಹನುಮೇ ಗೌಡ

Pramod muthalik :ಎಡಿಜಿಪಿ ಅಲೋಕ್ ಕುಮಾರ್ ಅವರೇ ಕ್ಷಮೆ ಕೇಳಿ : ಮುತಾಲಿಕ್ ಆಗ್ರಹದ ಕಾರಣ ಗೊತ್ತಾ…?

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್