ಮೈಸೂರು ಭಾಗದಲ್ಲಿ ಸಿದ್ದರಾಮಯ್ಯ ( Siddaramaiah ) ರಾಜಕೀಯ ಹಿಡಿತ ಕಳೆದುಕೊಂಡಿದ್ದಾರೆಯೇ ಅನ್ನುವ ಅನುಮಾನ ಶುರುವಾಗಿದೆ. ಕಳೆದ ಬಾರಿ ತಮ್ಮದೇ ಭದ್ರಕೋಟೆ ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯ ಬಾದಾಮಿಯಲ್ಲಿ ಪ್ರಯಾಸದ ಗೆಲುವು ಸಾಧಿಸಿದ್ದರು. ಮುಂದಿನ ಚುನಾವಣೆಯಲ್ಲಿ ಬಾದಾಮಿ ಕೂಡಾ ಅವರಿಗೆ ಸೇಫ್ ಅಲ್ಲ ಅನ್ನಿಸಿದೆ
ಬೆಂಗಳೂರು : ಸಿದ್ದರಾಮಯ್ಯ ಅಂದ್ರೆ ಮೈಸೂರು, ಮೈಸೂರು ಅಂದ್ರೆ ಸಿದ್ದರಾಮಯ್ಯ ( Siddaramaiah ) ಅನ್ನುವ ಕಾಲ ಹೊರಟು ಹೋಗಿದೆ. ಈಗ್ಲೂ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂದು ಬಯಸುತ್ತಾರೆ. ಆದರೆ ಸಿದ್ದರಾಮಯ್ಯ ಅವರಿಗೆ ಸುಲಭದಲ್ಲಿ ಗೆಲುವು ಸಾಧಿಸಬಹುದಾದ ಕ್ಷೇತ್ರದ ಕೊರತೆ ಕಾಡುತ್ತಿದೆ. 2023ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಕಾಂಗ್ರೆಸ್ ನ ಬಣವೊಂದು ಪ್ರಯತ್ನಿಸುತ್ತಿದ್ದು, ಹೀಗಾಗಿ ಸೇಫ್ ಕ್ಷೇತ್ರದ ಹುಡುಕಾಟ ಮುಂದುವರಿದಿದೆ.
ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದಲ್ಲಿ ಗೆಲ್ಲುವುದು ಸುಲಭವಿಲ್ಲ. ಕಳೆದ ಬಾರಿ ಬಾದಾಮಿಯಲ್ಲಿ ಗೆಲ್ಲಬೇಕಾದರೆ ಪಟ್ಟ ಶ್ರಮ ಯಾರಿಗೂ ಬೇಡ. ಸಿದ್ದರಾಮಯ್ಯರಂತಹ ನಾಯಕರು ಅಲ್ಲಿ ನೀರು ಕುಡಿದಷ್ಟೇ ಸಲೀಸಾಗಿ ಗೆಲ್ಲಬೇಕಿತ್ತು. ಆದರೆ ಹಾಗಾಗಿಲ್ಲ. ಈ ಕಾರಣದಿಂದ ಸಿದ್ದರಾಮಯ್ಯ ಇದೀಗ ವಲಸೆ ಮೂಡ್ ನಲ್ಲಿದ್ದಾರೆ.
ಇದನ್ನೂ ಓದಿ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಕೊಂಬೆ : ಅಪಾಯದಿಂದ ಪಾರಾದ ಮಾಜಿ ಸಚಿವೆ ಮೋಟಮ್ಮ ಸಹೋದರ
ಚಾಮರಾಜಪೇಟೆಯಲ್ಲಿ ಜಮೀರ್ ಸೀಟು ಬಿಟ್ಟು ಕೊಡ್ತಾರೆ, ಸುಲಭವಾಗಿ ಗೆಲ್ಲಬಹುದು ಅನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ ಯಾಕೋ ಸಿದ್ದರಾಮಯ್ಯನವರೇ ಈ ಬಗ್ಗೆ ಮನಸ್ಸು ಮಾಡಿಲ್ಲ. ಈ ನಡುವೆ ಸಿದ್ದರಾಮಯ್ಯನವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಅನ್ನುವ ಮಾತುಗಳು ಕೇಳಿ ಬಂದಿದೆ.
ಇದಕ್ಕೆ ಪೂರಕವಾಗಿ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಕೋಲಾರಕ್ಕೆ ಬನ್ನಿ ಎಂದು ಆಹ್ವಾನಿಸಿದ್ದಾರೆ. ಇದಕ್ಕೆ ತಾತ್ವಿಕ ಒಪ್ಪಿಗೆಯನ್ನೂ ಸಿದ್ದರಾಮಯ್ಯ ಕೊಟ್ಟಿದ್ದಾರೆ. ಈ ಸಂಬಂಧ ಇತ್ತೀಚೆಗೆ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್,ಕೃಷ್ಣ ಬೈರೇಗೌಡ, ನಜೀರ್ ಅಹಮ್ಮದ್, ಕೊತ್ತೂರು ಮಂಜುನಾಥ್, ಡಾ.ಎಂ.ಸಿ. ಸುಧಾಕರ್ ಭೇಟಿಯಾಗಿದ್ದು ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಚಾಮರಾಜಪೇಟೆ ಬಂದ್ ಮಾಡಿಸಿದ್ರೆ ಕಠಿಣ ಕ್ರಮ : ಪೊಲೀಸರ ವಾರ್ನಿಂಗ್
ಕೋಲಾರದಲ್ಲಿ ಇದೀಗ ಜೆಡಿಎಸ್ ನ ಕೆ ಶ್ರೀನಿವಾಸ ಗೌಡ ಶಾಸಕರಾಗಿದ್ದಾರೆ. ಈಗಾಗಲೇ ಕಾಂಗ್ರೆಸ್ ಸೇರಿರುವ ಅವರು ತಮ್ಮ ಮಗನ ರಾಜಕೀಯ ಭವಿಷ್ಯ ಕಟ್ಟುವ ಕೆಲಸದಲ್ಲಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಬಂದ್ರೆ ಕ್ಷೇತ್ರ ಬಿಟ್ಟು ಕೊಡುವುದಾಗಿ ಹೇಳಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ಸಂಭವಿಸಿದೆ. ಮತ ಬ್ಯಾಂಕ್ ಗಳು ಕೂಡಾ ಸ್ಥಾನ ಪಲ್ಲಟಗೊಂಡಿದೆ. ಬಿಜೆಪಿ ಅಲ್ಲಿ ಪ್ರಬಲವಾಗಿಲ್ಲ. ಶ್ರೀನಿವಾಸ ಗೌಡ ಅವರು ಕಾಂಗ್ರೆಸ್ ಗೆ ಬಂದ ಕಾರಣ ಜೆಡಿಎಸ್ ಕೂಡಾ ಅಲ್ಲಿ ಶಕ್ತಿಯುತವಾಗಿಲ್ಲ. ಅಲ್ಪಸಂಖ್ಯಾತ ಮತಗಳೇ ಈ ಕ್ಷೇತ್ರದಲ್ಲಿ ನಿರ್ಣಾಯಕವಾಗಿರುವುದು ಸಿದ್ದರಾಮಯ್ಯ ಅವರಿಗೆ ಇಲ್ಲಿ ಗೆಲುವು ಕಷ್ಟವಲ್ಲ ಅನ್ನಲಾಗಿದೆ.
Discussion about this post