Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕರ್ಮ ರಿಟರ್ನ್ಸ್… ಮಾಡಿದ್ದುಣ್ಣೋ ಮಹಾರಾಯ : ಸಿದ್ದು ಸಿಎಂ ಆಗುವುದನ್ನು ತಪ್ಪಿಸಿದ್ದ ಕುಮಾರಸ್ವಾಮಿ…..

Radhakrishna Anegundi by Radhakrishna Anegundi
August 23, 2019
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಅಂದು ಸಿದ್ದರಾಮಯ್ಯ ಜೆಡಿಎಸ್ ಪಕ್ಷದಲ್ಲಿದ್ದ ಸಂದರ್ಭದಲ್ಲಿ ಸಂಘಟನೆ ಮಾಡಿದ ಕಾರಣಕ್ಕೆ ಜೆಡಿಎಸ್ ಇಂದು ಕೂಡಾ ಉಸಿರಾಡುತ್ತಿದೆ. ಒಂದು ವೇಳೆ ಸಿದ್ದರಾಮಯ್ಯ ಮತ್ತು ತಂಡ ಕೆಲಸ ಮಾಡದಿರುತ್ತಿದ್ದರೆ ಕುಮಾರಸ್ವಾಮಿಗೆ ಸಿಎಂ ಭಾಗ್ಯ ಒಲಿದು ಬರುತ್ತಿರಲಿಲ್ಲ.

ದುರಂತ ಅಂದರೆ ಜೆಡಿಎಸ್ ಈಗ ಆಗಿನಂತೆ ಪ್ರಾದೇಶಿಕ ಪಕ್ಷವಾಗಿ ಉಳಿದಿಲ್ಲ. ಬದಲಾಗಿ ಅದೊಂದು ಕುಟುಂಬ ಮತ್ತು ಒಂದೇ ಜಾತಿಗೆ ಸೀಮಿತವಾದ ಪಕ್ಷದಂತೆ ಕಾಣಿಸುತ್ತಿದೆ. ಕುಟುಂಬ ರಾಜಕಾರಣವನ್ನು ಸಿಕ್ಕಾಪಟ್ಟೆ ಅಪ್ಪಿಕೊಂಡ ಕಾರಣಕ್ಕೆ ಕುಮಾರಸ್ವಾಮಿಯಂತಹ ಪ್ರತಿಭಾವಂತ ನಾಯಕನಿಗೂ ಅಧಿಕಾರದ ಅವಕಾಶವನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಕುಮಾರಸ್ವಾಮಿಯಂತಹ ಉತ್ತಮ ನಾಯಕನಿದ್ದರೂ ರೇವಣ್ಣನಂತಹ ಸೂಪರ್ ಸಿಎಂ ಕಾರಣಕ್ಕೆ ಜನ ಜೆಡಿಎಸ್ ಗೆ ಪೂರ್ಣ ಪ್ರಮಾಣದಲ್ಲಿ ಬಹುಮತ ಕೊಡಲು ಹಿಂಜರಿಯುತ್ತಿದ್ದಾರೆ. ಜೊತೆಗೆ ಈ ಬಾರಿ ಬಹುಮತ ಬಾರದಿದ್ದರೆ ಮತ್ತೆ ಜನಾದೇಶಕ್ಕೆ ಹೋಗ್ತಿವಿ ಎಂದು ಮೈತ್ರಿ ಸರ್ಕಾರಕ್ಕೆ ಮುಂದಾಗೋದು, ನಮ್ಮ ಕುಟುಂಬದಿಂದ ಈ ಬಾರಿ ಇಬ್ಬರೇ ಚುನಾವಣೆಗೆ ನಿಲ್ಲೋದು ಅಂತಾ ಹೇಳಿ ಉಪ ಚುನಾವಣೆಯಲ್ಲಿ ಪತ್ನಿಯನ್ನು ಕಣಕ್ಕಿಳಿಸುವಂತಹ ಎಡವಟ್ಟುಗಳು ಕುಮಾರಸ್ವಾಮಿಯ ಮೇಲಿಟ್ಟಿರುವ ನಂಬಿಕೆಯನ್ನು ಹುಸಿಗೊಳಿಸುವಂತೆ ಮಾಡಿದೆ.

ಕುಮಾರಸ್ವಾಮಿ ಉತ್ತಮ ನಾಯಕ ನಿಜ, ಆದರೆ ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಅವರು ವಿಫಲರಾಗಿದ್ದೇ ಹೆಚ್ಚು. ಮಾತೃ ಹೃದಯ ಅವರಲ್ಲಿದೆ ಆದರೆ ಅವರ ಸುತ್ತ ಮುತ್ತ ತುಂಬಿರುವ ಮಂದಿ ಹಾದಿ ತಪ್ಪಿಸುತ್ತಿದ್ದಾರೆ. ಅದಕ್ಕೆ ಸಾಕ್ಷಿ ಈ ಬಾರಿ ಅವರ ಸುತ್ತವಿದ್ದ ಮಂದಿ.

ಇಷ್ಟೆಲ್ಲಾ ಪೀಠಿಕೆ ಯಾಕಂದ್ರೆ ಇದೇ ಕುಮಾರಸ್ವಾಮಿ ಹಿಂದೊಮ್ಮೆ ಸಿದ್ದರಾಮಯ್ಯ ಸಿಎಂ ಆಗಿರುವುದನ್ನು ತಪ್ಪಿಸಿದ್ದರು. ಆದರೆ ಅದೇ ಸಿದ್ದರಾಮಯ್ಯ ಕುಮಾರಸ್ವಾಮಿ ಸಿಎಂ ಆಗುವುದನ್ನು ತಪ್ಪಿಸಲಿಲ್ಲ, ಆದರೆ ಸಿಕ್ಕ ಸಿಎಂ ಪದವಿಯನ್ನು ಉಳಿಸಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಾಗಲಿಲ್ಲ.

ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ತಾನೇ ಸಿಎಂ ಪದವಿ ತಪ್ಪಿಸಿದ್ದೇನೆ ಎಂದು ಸದನದಲ್ಲೇ ಕುಮಾರಸ್ವಾಮಿ ಒಪ್ಪಿಕೊಂಡಿದ್ದರು. ಆದರೆ ಸಿದ್ದರಾಮಯ್ಯ ಸಿಎಂ ಆಗುವುದನ್ನು ತಪ್ಪಿಸಲು ಕಾರಣವೇನು ಅನ್ನುವುದು ಯಕ್ಷ ಪ್ರಶ್ನೆ. ಒಟ್ಟಿನಲ್ಲಿ ಸಿದ್ದರಾಮಯ್ಯ ಬೆಳೆಯುವುದು ದಳಪತಿಗಳಿಗೆ ಬೇಕಿರಲಿಲ್ಲ ಅನ್ನುವುದು ಸ್ಪಷ್ಟ. ನಾಯಕನನ್ನು ಬೆಳೆಸಲಾಗದವರು ಅದ್ಯಾವ ಸೀಮೆ ನಾಯಕರು.

ಇಂದು ಈ ಸಂಬಂಧ ಮಾತನಾಡಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಪದವಿ ತಪ್ಪಿದ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಹೇಗೆ ತಮಗೆ ಮುಖ್ಯಮಂತ್ರಿ ಸ್ಥಾನವನ್ನು ತಪ್ಪಿಸಿದರು ಎಂದು ಸಿದ್ದರಾಮಯ್ಯಎಳೆಎಳೆಯಾಗಿ ಬಿಡಿಸಿದ್ದಾರೆ.

2004ರಲ್ಲಿಶರದ್‌ ಪವಾರ್‌ ಮನೆಯಲ್ಲಿ ಸಭೆ ನಡೆಯಿತು. ಅಲ್ಲಿ ದೇವೇಗೌಡರು ಸೇರಿದಂತೆ ನಾವು ಹಾಜರಿದ್ದೆವು. ಆಗ ಖುದ್ದು ಶರದ್‌ ಪವಾರ್‌ ಅವರು ಮುಖ್ಯಮಂತ್ರಿ ಹುದ್ದೆಯನ್ನು ಕೇಳುವಂತೆ ಸಲಹೆ ನೀಡಿದರು.

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಸೋನಿಯಾ ಗಾಂಧಿ ಅವರು ಒಪ್ಪಿಕೊಂಡಿದ್ದಾರೆ ಎಂದು ದೇವೇಗೌಡರ ಎದುರಲ್ಲೇ ಶರದ್‌ ಪವಾರ್‌ ಹೇಳಿದ್ದರು. ಆದರೆ ದೇವೇಗೌಡರು ನಮಗೆ ಡೆಪ್ಯೂಟಿ ಸಿಎಂ ಸಾಕು ಎಂದು ಹೇಳಿದರು. ನನ್ನ ಎದುರಲ್ಲೇ ಮುಖ್ಯಮಂತ್ರಿ ಸ್ಥಾನ ಬೇಡ ಎಂದು ಹೇಳಿದರು. ಈ ವಿಚಾರವಾಗಿ ದೇವೇಗೌಡರಲ್ಲಿ ಕಾರಣ ಕೇಳಿದಾಗ, ಎಸ್‌ಎಂ ಕೃಷ್ಣ ಅವರ ಮೇಲೆ ನಾವು ಚಾರ್ಚ್‌ಶೀಟ್‌ ಹಾಕಿದ್ದೇವೆ. ಹಾಗಾಗಿ ನಾವು ಸಿಎಂ ಸ್ಥಾನ ತಗೊಂಡ್ರೆ ಅದನ್ನೆಲ್ಲಾ ಡಿಫೆಂಡ್‌ ಮಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ನಮಗೆ ಉಪಮುಖ್ಯಮಂತ್ರಿ ಸ್ಥಾನವೇ ಸಾಕು ಎಂದಿದ್ದಾಗಿ ಸಿದ್ದರಾಮಯ್ಯ ಅಂದಿನ ಘಟನೆಯನ್ನು ಬಿಡಿಸಿಟ್ಟಿದ್ದಾರೆ.

ಅಂದು ತಮಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಿದ್ದು ನಾವೇ ಎಂದು ಕುಮಾರಸ್ವಾಮಿ ಅಸೆಂಬ್ಲಿಯಲ್ಲಿ ಸತ್ಯ ಒಪ್ಪಿಕೊಂಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇದನ್ನೆಲ್ಲಾ ಸಹಿಸಿಕೊಳ್ಳಬೇಕಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190823220038″); document.getElementById(“div_6020190823220038”).appendChild(scpt);
var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190823220038″); document.getElementById(“div_6020190823220038”).appendChild(scpt);
Tags: ಕುಮಾರಸ್ವಾಮಿಸಿದ್ದರಾಮಯ್ಯ
ShareTweetSendShare

Discussion about this post

Related News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Latest News

arpith indravadan arrest car accident mangalore

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್