ಬೆಂಗಳೂರು : ಉಜಿರೆ SDM ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸಿಬಿಐ ಮರು ತನಿಖೆ ವಹಿಸಿಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಪ್ರಕರಣದ ತನಿಖೆ ನಡೆಸಿದ್ದ ಎರಡು ತನಿಖಾ ಸಂಸ್ಥೆಗಳು ಅಂದ್ರೆ ಸಿಐಡಿ ಮತ್ತು ಸಿಬಿಐ ಸಂತೋಷ್ ರಾವ್ ಪ್ರಮುಖ ಆರೋಪಿಯೆಂದು ಹೇಳಿದೆ.
ಜೊತೆಗೆ ವೈದ್ಯಕೀಯ ಪರೀಕ್ಷೆಯೂ ಸಂತೋಷ್ ರಾವ್ ಕೃತ್ಯ ಎಸಗಿರುವುದಕ್ಕೆ ಸಾಕ್ಷಿ ಕೊಟ್ಟಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.
ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸೌಜನ್ಯಾ 2012ರ ಅ.9 ರಂದು ಕಾಣೆಯಾಗಿದ್ದಳು.
ಅ.10 ರಂದು ಸೌಜನ್ಯಾ ಶವ ಪತ್ತೆಯಾಗಿತ್ತು. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ ವೇಳೆ ಆಕೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವುದು ಗೊತ್ತಾಗಿದ್ದು.
ಈ ಕೊಲೆ ಪ್ರಕರಣದಲ್ಲಿ ದೊಡ್ಡ ದೊಡ್ಡವರ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ನಡೆಸುತ್ತಿದ್ದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು.
ನಂತರ ಕೆಲ ಸಂಘಟನೆಗಳು ಸಿಐಡಿ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ತನಿಖೆಯನ್ನು ಸಿಬಿಐಗೆ ಸರ್ಕಾರ ಹಸ್ತಾಂತರಿಸಿತ್ತು.
2016ರಲ್ಲಿ ತನಿಖೆ ಪೂರ್ಣಗೊಳಿಸಿದ ಸಿಬಿಐ ಆರೋಪ ಪಟ್ಟಿ ಸಲ್ಲಿಸಿತ್ತು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸೌಜನ್ಯಾ ತಂದೆ ಚಂದಪ್ಪಗೌಡ 2018ರಲ್ಲಿ ಪ್ರಕರಣದ ಮರು ತನಿಖೆಗೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದರು.
ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗಲು ಧರ್ಮಸ್ಥಳದ ಮಲ್ಲಿಕ್ ಜೈನ್, ಉದಯ ಜೈನ್ ಮತ್ತು ಧೀರಜ್ ಜೈನ್ಗೆ ಸೂಚಿಸಿ ಸಿಬಿಐ ವಿಚಾರಣಾ ನ್ಯಾಯಾಲಯ 2016ರಲ್ಲಿ ಜಾರಿಗೊಳಿಸಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೀಗಾಗಿ ಪ್ರಕರಣದಲ್ಲಿ ಸಾಕ್ಷಿಗಳಾಗಿರುವ ಧೀರಜ್ ಜೈನ್, ಮಲ್ಲಿಕ್ ಜೈನ್ ಮತ್ತು ಉದಯ್ ಜೈನ್ ವಿರುದ್ಧ ಸಂಶಯ ವ್ಯಕ್ತಪಡಿಸಿ ಚಂದಪ್ಪ ಗೌಡ ಮರು ತನಿಖೆ ಕೋರಿದ್ದಾರೆ.
Discussion about this post