ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಸೇರಿ ಮೂವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಹೊಳಿಸಿ ಅದೇಶಿಸಿದ್ದಾರೆ.
ನಿಮ್ಮ ಮಕ್ಕಳ ನೆಮ್ಮದಿಯ ನಿದ್ದೆಗಾಗಿ ಏನು ಮಾಡಬೇಕು….?
ಇನ್ನುಳಿದ ರಾಜೀನಾಮೆ ನೀಡಿರುವ ಶಾಸಕರ ಪ್ರಕರಣಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸವಿವರವಾಗಿ ಮಾಹಿತಿ ನೀಡುತ್ತೇನೆ. ಅನರ್ಹಗೊಂಡಿರುವ ಶಾಸಕರು 15ನೇ ವಿಧಾನಸಭೆ ಅವಧಿ ಅಂದ್ರೆ 3 ವರ್ಷ 10 ತಿಂಗಳು ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಿಲ್ಲ ಎಂಬುದನ್ನು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಒಂದು ವೇಳೆ ಅದಕ್ಕೂ ಮುನ್ನ ವಿಧಾನಸಭೆ ವಿಸರ್ಜನೆಗೊಂಡು ಮಧ್ಯಂತರ ಚುನಾವಣೆ ಬಂದರೆ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದಾಗಿದೆ.
ಪಕ್ಷೇತರ ಶಾಸಕ ಆರ್.ಶಂಕರ್ ಮೈತ್ರಿ ಸಂಪುಟ ಸೇರ್ಪಡೆಯ ಮುನ್ನವೇ ತಮ್ಮ ಪಕ್ಷ ಕೆಪಿಜೆಪಿಯನ್ನು ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ವಿಶ್ವಾಸಮತ ಕಲಾಪಕ್ಕೆ ಗೈರಾಗಿದ್ದರಿಂದ ಆರ್.ಶಂಕರ್ ಅವರನ್ನು ಸಹ ಅನರ್ಹಗೊಳಿಸಬೇಕೆಂದು ಕಾಂಗ್ರೆಸ್ ಸ್ಪೀಕರ್ ಬಳಿ ಮನವಿ ಮಾಡಿಕೊಂಡಿತ್ತು.
ಉಳಿದಂತೆ ಅತೃಪ್ತರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ, ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಶ್ರೀಮಂತ್ ಪಾಟೀಲ್, ಆನಂದ್ ಸಿಂಗ್, ಕೆ.ಸುಧಾಕರ್, ಎಂಟಿಬಿ ನಾಗರಾಜ್, ನಾರಾಯಣಗೌಡ, ಹೆಚ್.ವಿಶ್ವನಾಥ್ ಮತ್ತು ಗೋಪಾಲಯ್ಯರ ಮೇಲೆ ಇನ್ನು ಅನರ್ಹತೆ ತೂಗುಗತ್ತಿ ನೇತಾಡುತ್ತಿದೆ.
ಇವತ್ತು ಸ್ಪೀಕರ್ ಕೊಟ್ಟಿರುವ ತೀರ್ಮಾನ ಬಿಜೆಪಿಗೆ ನೋವು ತಂದಿರಬಹುದು. ನಾಳೆ ಸುಪ್ರೀಂಕೋರ್ಟ್ ನಲ್ಲಿ ಸ್ಪೀಕರ್ ಆದೇಶಕ್ಕೆ ಹಿನ್ನಡೆಯೂ ಆಗಬಹುದು ಆದರೆ ಸ್ಪೀಕರ್ ರಮೇಶ್ ಕುಮಾರ್ ಕೊಟ್ಟಿರುವ ಇಂದಿನ ಆದೇಶವನ್ನು ಮೆಚ್ಚಲೇಬೇಕು.
ಕ್ಷೇತ್ರದ ಮತದಾರರಿಗೆ ವಂಚನೆ ಮಾಡುವ ಜನಪ್ರತಿನಿಧಿಗಳಿಗೆ ಇದೊಂದು ಒಳ್ಳೆಯ ಪಾಠ. ಪಕ್ಷಾಂತರಿ ಹಣೆ ಪಟ್ಟಿ ಹೊತ್ತ ಶಾಸಕರಿಗೆ ಇದೊಂದು ಗಲ್ಲು ಅನ್ನುವುದು ಸತ್ಯ.
Discussion about this post