ಬೆಂಗಳೂರು : ರಾಜ್ಯದಲ್ಲಿ SSLC ಪರೀಕ್ಷೆಗಳು ಪ್ರಾರಂಭಗೊಂಡಿದೆ. ಇಡೀ ಕರುನಾಡು SSLC ವಿದ್ಯಾರ್ಥಿಗಳ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದೆ. ದೇವರೇ ಮಕ್ಕಳಿಗೆ ಯಾವುದೇ ತೊಂದರೆಯಾಗದಿರಲಿ ಎಂದು ಪ್ರತಿಯೊಬ್ಬರೂ ಬೇಡಿಕೊಳ್ಳುತ್ತಿದ್ದಾರೆ.
ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದು ಮಕ್ಕಳಿಗೆ ಶುಭ ಕೋರಿದ್ದಾರೆ.
ಇನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಾ ಮಕ್ಕಳಿಗೆ ಗುಡ್ ಲಕ್ ಅಂದಿದ್ದಾರೆ.
ಪ್ರತಿಪಕ್ಷಗಳ ಕಡೆಯಿಂದ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಕೂಡಾ ಭಯಪಡಬೇಡಿ, ಧೈರ್ಯವಾಗಿ ಪರೀಕ್ಷೆ ಬರೆಯಿರಿ ಅಂದಿದ್ದಾರೆ.
Discussion about this post