ಬೆಂಗಳೂರು : ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬೇಕು ಅನ್ನುವ ಬೇಡಿಕೆ ತುಂಬಾ ಹಳೆಯದು. ಹಿಂದೊಮ್ಮೆ ಪ್ರಾರಂಭಿಸಿದ್ದ ಯೋಜನೆಯನ್ನು ನಿಲ್ಲಿಸಿದಾಗ ಸಾಕಷ್ಟು ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದರು. ಕೊರೋನಾದಂತಹ ಕಾಲದಲ್ಲಿ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಬೆಳೆಯಬೇಕಾದರೆ ಮೊಟ್ಟೆ ನೀಡಬೇಕು. ಹಣಕಾಸಿನ ಸಮಸ್ಯೆಯನ್ನು ಮುಂದಿಟ್ಟುಕೊಂಡು ಮಕ್ಕಳ ಆರೋಗ್ಯದಲ್ಲಿ ಚೆಲ್ಲಾಟ ಬೇಡ ಅಂದಿದ್ದರು.
ಇದೀಗ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳಿನಿಂದ ಶಾಲಾ ಮಕ್ಕಳಿಗೆ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆದರೆ ಇದು ಕೇವಲ 7 ಜಿಲ್ಲೆಗಳಿಗೆ ಮಾತ್ರ ಸೀಮಿತ. ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಯ ಮಕ್ಕಳು ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ. ಯಾರೂ ಮೊಟ್ಟೆ ತಿನ್ನುವುದಿಲ್ಲವೋ ಅವರಿಗೆ ಬಾಳೆಹಣ್ಣನ್ನು ನೀಡಲಾಗುತ್ತದೆ.
ಯಾದಗಿರಿ ಜಿಲ್ಲೆಯಲ್ಲಿ ಶೇ74, ಕಲಬುರಗಿ ಜಿಲ್ಲೆಯಲ್ಲಿ ಶೇ 72.4, ಬಳ್ಳಾರಿ ಜಿಲ್ಲೆಯಲ್ಲಿ ಶೇ 72.3, ಕೊಪ್ಪಳ ಜಿಲ್ಲೆಯಲ್ಲಿ ಶೇ 70.7, ರಾಯಚೂರು ಜಿಲ್ಲೆಯಲ್ಲಿ ಶೇ 70.6, ಬೀದರ್ ಜಿಲ್ಲೆಯಲ್ಲಿ ಶೇ 69.1, ವಿಜಯಪುರ ಜಿಲ್ಲೆಯಲ್ಲಿ ಶೇ 68 ಮಕ್ಕಳಲ್ಲಿ ಅಪೌಷ್ಟಿಕತೆ ಸಮಸ್ಯೆ ಕಂಡುಬಂದಿದೆ. ಕೆಲವು ಜಿಲ್ಲೆಗಳಲ್ಲಿ ಶೇ 70ಕ್ಕಿಂತಲೂ ಹೆಚ್ಚು ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ ಇರುವುದು ಗೊತ್ತಾಗಿದೆ. 14 ಲಕ್ಷಕ್ಕೂ ಹೆಚ್ಚು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ.
ಆದರೆ ಕೇವಲ 46 ದಿನಗಳ ಕಾಲ ಮಾತ್ರ ಮೊಟ್ಟೆ ವಿತರಣೆಯಾಗಲಿದೆ. ಪ್ರಾಯೋಗಿಕ ಅನ್ನುವ ಹೆಸರಿನಲ್ಲಿ ಜಾರಿಯಾಗುತ್ತಿರುವ ಈ ಯೋಜನೆ 47ನೇ ದಿನಕ್ಕೆ ಸ್ಥಗಿತಗೊಂಡರೂ ಅಚ್ಚರಿ ಇಲ್ಲ
Discussion about this post