ಒಡಿಶಾದ ಸಂಬಲ್ಪುರದಲ್ಲಿ ಪ್ರಧಾನಿ ಮೋದಿಯವರ ಹೆಲಿಕಾಪ್ಟರ್ನ್ನು ಪರಿಶೀಲಿಸಿದ್ದಕ್ಕಾಗಿ ಚುನಾವಣೆ ಆಯೋಗದಿಂದ ಕರ್ನಾಟಕದ ಐಎಎಸ್ ಅಧಿಕಾರಿಯನ್ನು ಅಮಾನತು ಮಾಡಿದ್ದಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ತಡೆ ನೀಡಿದೆ.
1996ರ ಬ್ಯಾಚ್ನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿಯಾಗಿರುವ ಮೊಹಮ್ಮದ್ ಮೊಹ್ಸಿನ್, ಎಸ್ಪಿಜಿ ಸಿಬ್ಬಂದಿ ಬಗ್ಗೆ ನೀಡಿದ್ದ ಸೂಚನೆಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿಲ್ಲ ಅನ್ನುವ ಕಾರಣ ನೀಡಿ ಚುನಾವಣೆ ಆಯೋಗ ಅಮಾನತು ಮಾಡಿತ್ತು.
ಚುನಾವಣಾ ಆಯೋಗದ ಆದೇಶದ ವಿರುದ್ಧ ಮೊಹ್ಸಿನಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು.
ಈ ವೇಳೆ ಎಸ್ಪಿಜಿ ಸಿಬ್ಬಂದಿ ಯಾವುದಕ್ಕೆ ಮತ್ತು ಎಲ್ಲದಕ್ಕೂ ಅರ್ಹರಾಗಿದ್ದಾರೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಚುನಾವಣಾ ಅಧಿಕಾರಿಗಳು ಕರ್ನಾಟಕದ ಮುಖ್ಯಮಂತ್ರಿ ಅವರ ಖಾಸಗಿ ವಾಹನಗಳನ್ನು ಒಂದಕ್ಕಿಂತ ಹೆಚ್ಚು ಬಾರಿ ಪರಿಶೀಲಿಸಿದ್ದಾರೆ. ಆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಒಡಿಶಾ ಮುಖ್ಯಮಂತ್ರಿಯ ವಾಹನವನ್ನು ಕೂಡ ಪರಿಶೀಲಿಸಿದ್ದಾರೆ.
ಕರ್ನಾಟಕದಲ್ಲಿ ಕೈಗೊಂಡ ಒಂದು ರ್ಯಾಲಿ ವೇಳೆ ಪ್ರಧಾನಿ ಮೋದಿ ಹೆಲಿಕಾಪ್ಟರ್ನಿಂದ ಕಪ್ಪು ಪೆಟ್ಟಿಗೆಯೊಂದನ್ನು ಕಾರ್ನಲ್ಲಿಡಲಾದ ವಿವಾದವನ್ನು ಉಲ್ಲೇಖಿಸಿದ ಟ್ರಿಬ್ಯುನಲ್, “ಅದರ ಬಗ್ಗೆ ಪ್ರಶ್ನೆಗಳು ಹುಟ್ಟಿಕೊಂಡಿವೆ. ಆದರೆ ಸ್ಪಷ್ಟವಾಗಿ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಚುನಾವಣಾ ಆಯೋಗದ ಆದೇಶಕ್ಕೆ ತಡೆ ನೀಡಿತು.
ಈ ನಡುವೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಮೊಹ್ಸಿನ್ ಅವರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಟ್ಟಿದೆ.
ಮತ್ತೊಂದು ಕಡೆ ಸಿಎಟಿ ಅಮಾನತು ಆದೇಶಕ್ಕೆ ತಡೆ ಕೊಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡ ಚುನಾವಣಾ ಆಯೋಗ ಮೊಹ್ಸಿನ್ ಅವರ ಅಮಾನತು ಆದೇಶವನ್ನು ರದ್ದುಗೊಳಿಸಿ, ಕರ್ನಾಟಕ ಸರ್ಕಾರದ ಸೇವೆಗೆ ಮರಳುವಂತೆ ಸೂಚಿಸಿದೆ. ಆದರೂ ಅಲ್ಲೂ ಕೊಕ್ಕೆ ಇಡುವುದನ್ನು ಮಾತ್ರ ಆಯೋಗ ಮರೆತಿಲ್ಲ.
Discussion about this post