ಮಂಗಳೂರು : ಅಕ್ರಮ ಗೋ ಸಾಗಾಟ ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅನೇಕ ಕ್ರಮಗಳನ್ನು ಕೈಗೊಂಡಿದೆ.
ಅದರಲ್ಲೂ ಕರಾವಳಿ ಭಾಗದಲ್ಲಿ ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ಹಾಗಿದ್ದರೂ ಅಮಾನವೀಯವಾಗಿ ಗೋವುಗಳ ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ.
ಅದರಲ್ಲೂ ಕರ್ನಾಟಕದ ಕರಾವಳಿ ಜಿಲ್ಲೆಗಳಿಂದ ಕೇರಳಕ್ಕೆ ಗೋವುಗಳನ್ನು ಸಾಗಾಟ ಮಾಡಲಾಗುತ್ತಿದೆ.
ಹೀಗೆ ಅಮಾನವೀಯವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆಗಟ್ಟಿರುವ ಬೈಂದೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ನಜೀರುಲ್ಲ ಮತ್ತು ಮೈಸೂರಿನ ರಾಘವೇಂದ್ರ ಎಂದು ಗುರುತಿಸಲಾಗಿದೆ.
ಇವರಿಬ್ಬರು ಕೆಲಸಗಾರರಾಗಿರುವ ಸಾಧ್ಯತೆಗಳಿದ್ದು ಇದರ ಹಿಂದಿನ ಕಿಂಗ್ ಪಿನ್ ನನ್ನು ಬಂಧಿಸುವ ಬಗ್ಗೆ ಪೊಲೀಸ್ ಇಲಾಖೆ ಮನಸ್ಸು ಮಾಡಬೇಕಾಗಿದೆ.
ಲಾರಿಯಲ್ಲಿ ಅಮಾನವೀಯವಾಗಿ ತುಂಬಿಸಿದ್ದ 18 ಗೋವುಗಳನ್ನು ಈ ವೇಳೆ ಪತ್ತೆ ಹಚ್ಚಲಾಗಿದ್ದು ಈ ಪೈಕಿ ಎರಡು ಗೋವುಗಳು ಮೃತಪಟ್ಟಿವೆ. ಮಹಾರಾಷ್ಟ್ರದ ಸೊಲ್ಲಾಪುರದಿಂದ ಕಾಸರಗೋಡಿನ ಚೇರ್ಕಳಕ್ಕೆ ಗೋವುಗಳನ್ನು ಸಾಗಿಸಲಾಗುತ್ತಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ
Discussion about this post