ಬೆಂಗಳೂರು : ಚಂದನವನದ ಹಿರಿಯ ನಟ ಸತ್ಯಜಿತ್ (72) ವಯೋಸಹಜ ಕಾಯಿಲೆಗಳಿಗೆ ತುತ್ತಾಗಿ ಅಕ್ಟೋಬರ್ 9 ರಂದು ತಡರಾತ್ರಿ 2 ಗಂಟೆಗೆ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೀಗ ಪಾರ್ಥಿವ ಶರೀರವನ್ನು ಹೆಗಡೆನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಹೆಗಡೆ ನಗರದ ಖಬರ್ ಸ್ಥಾನ್ ದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.
ವೃತ್ತಿಯಲ್ಲಿ ಬಸ್ ಚಾಲಕರಾಗಿದ್ದ ಸತ್ಯಜಿತ್ ನಟನೆ ಬಗ್ಗೆ ಆಸಕ್ತಿ ಹೊಂದಿದ್ದರು. ಹೀಗಾಗಿ ನಾಟಕಗಳಲ್ಲಿ ಬಣ್ಣ ಹಚ್ಚಲಾರಂಭಿಸಿದರು. ಹೀಗೆ ಪ್ರಾರಂಭವಾದ ಬಣ್ಣದ ಲೋಕದ ಪಯಣ, ಚಂದನವನಕ್ಕೂ ಕರೆದು ತಂದು. ಈ ನಡುವೆ ಮುಂಬೈ ನಲ್ಲಿ ನಾಟಕ ಪ್ರದರ್ಶನ ನೀಡುತ್ತಿದ್ದ ವೇಳೆ ಸತ್ಯಜಿತ್ ಅವರಿಗೆ ನಾನಾ ಪಾಟೇಕರ್ ಅವರ ಪರಿಚಯವಾಯ್ತು, ಹೀಗಾಗಿ ಬಾಲಿವುಡ್ ಚಿತ್ರಗಳಲ್ಲೂ ಸತ್ಯಜಿತ್ ನಟಿಸಿದ್ದರು.
Discussion about this post