Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನಡೆಯುವ ಶಕ್ತಿ ಹೊಂದಿರುವ ಡಾ. ಬಿಎಂ ಹೆಗ್ಡೆ ವೀಲ್ ಚೇರ್ ನಲ್ಲಿ ಬಂದು ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದ್ಯಾಕೆ

ಹೆಗ್ಡೆಯವರು ನಡೆಯುವ ಸಾಮರ್ಥ್ಯವನ್ನೂ ಹೊಂದಿದ್ದರೂ ವೀಲ್ ಚೇರ್ ನಲ್ಲಿ ಬಂದಿದ್ಯಾಕೆ ಅನ್ನುವುದು ಹಲವರ ಪ್ರಶ್ನೆ.

Radhakrishna Anegundi by Radhakrishna Anegundi
November 10, 2021
in ಟಾಪ್ ನ್ಯೂಸ್
veteran-doctor-educationist-belle-monappa-hegde-awarded-padma-vibhushan
Share on FacebookShare on TwitterWhatsAppTelegram

ನವದೆಹಲಿ : ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕೊಡಮಾಡಿರುವ ಪದ್ಮವಿಭೂಷಣ ಪ್ರಶಸ್ತಿಯನ್ನು ಕರ್ನಾಟಕದ ಖ್ಯಾತ ಹೃದ್ರೋಗ ತಜ್ಞ ಡಾ. ಬಿ ಎಂ ಹೆಗ್ಡೆ ಸ್ವೀಕರಿಸಿದ್ದಾರೆ. ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳು ಪದ್ಮವಿಭೂಷಣ ಪ್ರಶಸ್ತಿ ಪ್ರಧಾನ ಮಾಡಿದರು.

bm hegde 04

ಡಾ. ಬಿ ಎಂ ಹೆಗ್ಡೆ ಎಂದೇ ಪರಿಚಿತರಾಗಿರುವ ಅವರ ಪೂರ್ಣ ಹೆಸರು ಬೆಳ್ಳೆ ಮೋನಪ್ಪ ಹೆಗ್ಡೆ. ಉಡುಪಿ ಜಿಲ್ಲೆಯ ಬೆಳ್ಳೆ ಎಂಬಲ್ಲಿ. 1938 ಆಗಸ್ಟ್​ 18ರಂದು ಜನಿಸಿದ್ದ ಹೆಗ್ಡೆಯವರಿಗೆ ಈಗ 83 ವರ್ಷ.

ಉಡುಪಿಯ ಹಿರಿಯಡ್ಕದ ಬೋರ್ಡ್ ಹೈಸ್ಕೂಲ್​ನಲ್ಲಿ ಪ್ರೌಢ ಶಿಕ್ಷಣ ಮುಗಿಸಿದ ಬಿಎಂ ಹೆಗ್ಡೆ ನಂತರ ಎಂಜಿಎಂ ಕಾಲೇಜಿನಲ್ಲಿ ಇಂಟರ್ ಮೀಡಿಯೇಟ್ ಮುಗಿಸಿದ್ದರು. 1960ರಲ್ಲಿ ಮದ್ರಾಸ್ ವಿಶ್ವವಿದ್ಯಾಲಯದಲ್ಲಿ MBBS ಪದವಿ ಪಡೆದರು.ಲಕ್ನೋ ವಿಶ್ವವಿದ್ಯಾಲಯದಲ್ಲಿ ಎಂಡಿ ಪದವಿ ಪಡೆದ ಅವರು, ಉನ್ನತ ಶಿಕ್ಷಣವನ್ನು ಲಂಡನ್​ ನಲ್ಲಿ ಪಡೆದರು, ನೊಬೆಲ್ ಪಾರಿತೋಷಕ ಪುರಸ್ಕೃತ ಪ್ರೊ. ಬೆರ್ನಾರ್ಡ್ ಲೋವ್ನ್ ಅವರೊಂದಿಗೆ ಸೇವೆ ಸಲ್ಲಿಸಿದ ಹಿರಿಮೆ ಹೆಗ್ಡೆಯವರದ್ದು. ಲಂಡನ್​ ಕಾಲೇಜಿನ MRCP ಪರೀಕ್ಷಕರಾಗಿ ಆಯ್ಕೆಯಾದ ಮೊದಲ ಭಾರತೀಯ ಅನ್ನುವ ಗೌರವವೂ ಬಿಎಂ ಹೆಗ್ಡೆಯವರಿಗೆ ಸಂದಿದೆ.

bm hegde 01

ಮಣಿಪಾಲ ಕಸ್ತೂರ್ ಬಾ ವೈದ್ಯಕೀಯ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ, ಡೀನ್ ಆಗಿ ಮಾಹೆ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದ ಡಾ. ಬಿ.ಎಂ. ಹೆಗ್ಡೆ ಹೃದ್ರೋಗ ತಜ್ಞ, ಉಪನ್ಯಾಸಕ, ಪರೀಕ್ಷಕ, ಸಂಶೋಧಕ, ಬರಹಗಾರ, ಲೇಖಕ, ಶಿಕ್ಷಣ ತಜ್ಞ ಅನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

1999ರಲ್ಲಿ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಬಿ.ಸಿ.ರಾಯ್ ಪ್ರಶಸ್ತಿ ಪಡೆದ ಹೆಗ್ಡೆಯವರು 1997ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2010ರಲ್ಲಿ ಪದ್ಮಭೂಷಣ ಪ್ರಶಸ್ತಿ  ಪಡೆದಿದ್ದರು. ಲಂಡನ್ ಥೇಮ್ಸ್ ವ್ಯಾಲಿ ವಿಶ್ವವಿದ್ಯಾಲಯ ಆಶ್ರಯದಲ್ಲಿ ಆಯುರ್ವೇದ ವೈದ್ಯಕೀಯ ಕಾಲೇಜು ಆರಂಭವಾಗಲು ಕಾರಣಕರ್ತರಾಗಿದ್ದಾರೆ.ಪ್ರಸ್ತುತ ಭಾರತೀಯ ವಿದ್ಯಾಭವನದ ಮಂಗಳೂರು ಘಟಕದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

bm hegde 02

ಆದರೆ ಡಾ. ಬಿಎಂ ಹೆಗ್ಡೆಯವರು ವೀಲ್ ಚೇರ್ ನಲ್ಲಿ ಬಂದು ಪ್ರಶಸ್ತಿ ಸ್ವೀಕರಿಸಿದ್ದು ಅಚ್ಚರಿಗೆ ಕಾರಣವಾಗಿದೆ.  ಹೆಗ್ಡೆಯವರು ನಡೆಯುವ ಸಾಮರ್ಥ್ಯವನ್ನೂ ಹೊಂದಿದ್ದರೂ ವೀಲ್ ಚೇರ್ ನಲ್ಲಿ ಬಂದಿದ್ಯಾಕೆ ಅನ್ನುವುದು ಹಲವರ ಪ್ರಶ್ನೆ. ಆದರೆ ಮಾಹಿತಿಗಳ ಪ್ರಕಾರ ಹೊಸ ಜಾಗದಲ್ಲಿ ವಯಸ್ಸಿನ ಕಾರಣದಿಂದ ನಡೆಯಲು ತೊಂದರೆಯಾಗಬಹುದು ಹೀಗಾಗಿ ರಾಷ್ಟ್ರಪತಿ ಶಿಸ್ತಿಗೆ ಅಡ್ಡಿಯಾಗಬಹುದೆಂದು ವೀಲ್ ಚೇರ್ ನಲ್ಲಿ ಬಂದು ಪ್ರಶಸ್ತಿ ಸ್ವೀಕರಿಸಿದ್ದಾರೆ. ಬಿಎಂ ಹೆಗ್ಡೆಯವರು ವೀಲ್ ಚೇರ್ ಕೂತ ಶೈಲಿಯಲ್ಲೇ ಗೊತ್ತಾಗುತ್ತಿತ್ತು ಅದು ಅವರಿಗೆ ಹೊಸ ಅನುಭವ ಅಂತಾ.

Tags: FEATUREDbm hegde
Share1TweetSendShare

Discussion about this post

Related News

Tomato Yield Makes Andhra Farmer Crorepati Andhra Pradesh farmer earns three crore in 45 days

ಟೊಮೊಟೊ ಬೆಳೆದವರು ಕೋಟ್ಯಧಿಪತಿ : ಆಂಧ್ರ ರೈತನಿಗೆ ಕೋಲಾರದಲ್ಲಿ ಸಿಕ್ತು ಚಿನ್ನದ ಬೆಲೆ

mandya-bike-riders-ejured-while-wheeling-maddur-bike-car-accident

ಮದ್ದೂರಿನಲ್ಲಿ ವ್ಹೀಲಿಂಗ್ : ಕಾರಿಗೆ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ ಸೈಯದ್ ಶೋಹೆಬ್ ಗ್ಯಾಂಗ್

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

Arpith Indravadan: ಹಿಟ್ ಅ್ಯಂಡ್ ರನ್ : ತುಳು ಕಾಮಿಡಿಯನ್ ಯೂಟ್ಯೂಬರ್ ಆರೆಸ್ಟ್

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Latest News

jail

ಕುವೈತ್ ನಲ್ಲಿ ಜೈಲುಪಾಲಾದ ಕೇರಳ ಮೂಲದ 19 ಮಂದಿ ನರ್ಸ್

bantwal city police arrest two thef kannada news

ಕರಾವಳಿಯಲ್ಲಿ ಚಿಗುರಿದ ಕಳ್ಳರ ಗ್ಯಾಂಗ್ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸರು

Chaitra Kundapura govinda-babu-poojari-ccb-police arrest

ಕಬಾಬ್ ವ್ಯಾಪಾರಿಗೆ ಎಲೆಕ್ಷನ್ ಸಮಿತಿ ಸದಸ್ಯನ ವೇಷ : ಸ್ವಯಂ ಘೋಷಿತ ಹಿಂದೂ ನಾಯಕಿಯ ಖತರ್ನಾಕ್ ಕಹಾನಿ

/ks-eshwarappa-meets-hd-kumaraswamy-bengaluru

ಜೆಡಿಎಸ್ ಬಿಜೆಪಿ ಮೈತ್ರಿ ಪ್ರಸ್ತಾಪ : ಕುಮಾರಸ್ವಾಮಿ ಶಕ್ತಿ ವರ್ಧನೆ ಸುಳಿವು ಬೆನ್ನಲ್ಲೇ ಚುರುಕಾದ ಈಶ್ವರಪ್ಪ

g20-summit-delhi-police-books-photographer-for-flying-drone-during-birthday-party

ಜನ್ಮದಿನ ಚಿತ್ರೀಕರಿಸಿದ ಕ್ಯಾಮಾರಮನ್ ವಿರುದ್ಧ ಕೇಸ್ : 1 ತಿಂಗಳ ಸೆರೆವಾಸ ಸಾಧ್ಯತೆ

https://torrentspree.com/karnataka-weather-forecast-and-rain-alert-for-monday-september-11/

11.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

puttur mahalingeshwara temple ex president N Sudhakar Shetty no more

ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿ ಮಾಜಿ ಅಧ್ಯಕ್ಷ ಎನ್ ಸುಧಾಕರ ಶೆಟ್ಟಿ ಇನ್ನಿಲ್ಲ

brindavana-kannada-serial-ramji-colours-kannada

ರಾಮ್ ಜೀ ನಿರ್ದೇಶನದಲ್ಲಿ ಮತ್ತೊಂದು ಸೀರಿಯಲ್ : ಬಿಗ್ ಬಾಸ್ ನಂತ್ರ ಬೃಂದಾವನ

chinese-reporter what-if-india-renamed-as-bharat-heres-what-un-chiefs-spokesperson-said

ಭಾರತ ಹೆಸರು ಬದಲಾವಣೆ : ಚೀನಾದ ಮಾಧ್ಯಮ ಪ್ರತಿನಿಧಿಗೆ ತಲೆ ಬಿಸಿ

bigg boss kannada season 10 contestants

ಬಿಗ್ ಬಾಸ್ ವೇದಿಕೆ ಇವರೆಲ್ಲಾ ಎಲ್ಲಿ ಹೋದ್ರು : ಮಹಾಮನೆಯಲ್ಲಿ ನಿರಾಸೆಯಾದವರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್