ಜಮ್ಮು ಕಾಶ್ಮೀರದ ಪೂಂಚ್ ಸೆಕ್ಟರ್ನ ತರಬೇತಿಯಲ್ಲಿ ಗ್ರೆನೇಡ್ ಸ್ಫೋಟದ ವೇಳೆ ಹುತಾತ್ಮರಾದ ಯೋಧ ಶ್ರೀಶೈಲ ಬಳಬಟ್ಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಹಾಗೂ ಸೇನಾ ಗೌರವದೊಂದಿಗೆ ಶುಕ್ರವಾರ ಯೋಧನ ಸ್ವಗ್ರಾಮ ವಿಜಯಪುರ ಮುದ್ದೇಬಿಹಾಳ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ಜರುಗಿತು.
ಬಳಬಟ್ಟಿ ಗ್ರಾಮದ ಆರೋಗ್ಯ ಉಪ ಕೇಂದ್ರದ ಮುಂಭಾಗದ ಆವರಣದಲ್ಲಿ ಯೋಧನ ಅಂತ್ಯಸಂಸ್ಕಾರ ಕಾರ್ಯ ನಡೆದಿದ್ದು, ಜಮ್ಮು ಕಾಶ್ಮೀರದ ಮದ್ರಾಸ್ 12ನೇ ರೆಜಿಮೆಂಟ್ನ ಸೈನಿಕರು ಮೂರು ಸುತ್ತು ಗುಂಡು ಹಾರಿಸಿ ಗೌರವ ವಂದನೆ ಸಲ್ಲಿಸಿದರು. ಪೊಲೀಸ್ ಸಿಬ್ಬಂದಿ ನಾಲ್ಕು ಸುತ್ತು ಕುಶಾಲ ತೋಪು ಹಾರಿಸಿ ಸರ್ಕಾರಿ ಗೌರವ ವಂದನೆ ಸಲ್ಲಿಸಿದರು.
Discussion about this post